ನವದೆಹಲಿ : ಇಂದು ದೇಶವ್ಯಾಪಿ ಕಾರ್ಮಿಕ ಸಂಘಟನೆಗಳಿಂದ ಬಂದ್ ನಡೆಸುತ್ತಿವೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಮುಷ್ಕರ ನಡೆಸುತ್ತಿವೆ.
ಕಾರ್ಮಿಕ ವಿರೊಧಿ ರೈತ ವಿರೋಧಿ ಕಾರ್ಪೊರೇಟ್ ಪರ ನೀತಿ ಖಂಡಿಸಿ ಹೋರಾಟಕ್ಕೆ ಕಾರ್ಮಿಕ ಸಂಘಟನೆಗಳು ಮುಂದಾಗಿದ್ದು, ದೇಶದಾದ್ಯಂತ ಸುಮಾರು 25 ಕೋಟಿಗೂ ಹೆಚ್ಚು ಕಾರ್ಮಿಕರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಕಾರ್ಮಿಕ ಸಂಘಟನೆಗಳು ತಿಳಿಸಿವೆ.
ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ ಸೇರಿದಂತೆ ಹಲವು ಕಾರ್ಮಿಕ ಕ್ಷೇತ್ರದಲ್ಲಿ ಸಮಸ್ಯೆಯನ್ನು ಮುಂದಿಟ್ಟುಕೊಂಡು ಪ್ರತಿಭಟನೆಗೆ ಮುಂದಾಗಿದ್ದು, ನಿನ್ನೆ ಮಧ್ಯರಾತ್ರಿಯಿಂದಲೇ ಸ್ಥಗಿತಗೊಂಡ LIC, ಕಾರ್ಖಾನೆಗಳು, ಬ್ಯಾಂಕ್ ವ್ಯವಹಾರ, AITUC, CITU, HMS, INTUC, SEWA ಮುಂತಾದ ಸಂಘಟನೆಗಳಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಕಾರ್ಮಿಕ ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಯಲ್ಲಿ ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗದ ಕಾರ್ಮಿಕರು ಕೂಡ ಭಾಗಿಯಾಗಲಿದ್ದಾರೆ.
1)ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಬೇಕು.
2)ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ತಿರಸ್ಕರಿಸಬೇಕು.
3)ಕನಿಷ್ಠ ವೇತನ ಜಾರಿಗೊಳಿಸಬೇಕು.
4)ಕೇಂದ್ರ ತಂದಿರುವ ನಿಯಮದಲ್ಲಿ ಸಂಘ ರಚಿಸುವ ಹಕ್ಕು ಕಸಿದುಕೊಳ್ಳಲಾಗಿದೆ
5)ಇದನ್ನು ರಾಜ್ಯ ಸರ್ಕಾರ ವಾಪಾಸ್ ಪಡೆಯಬೇಕು
6)ಹೊಸ ಸಂಘ ರಚಿಸಲು ಅನುಮತಿ ನೀಡಬೇಕು.
7)ಕೆಲಸದ ಅವಧಿಯನ್ನು 12 ಗಂಟೆಯಿಂದ 8 ಗಂಟೆಗೆ ಕಡಿತಗೊಳಿಸಬೇಕು.
8)ಗುತ್ತಿಗೆ ನೌಕರಿ ರದ್ದುಗೊಳಿಸಿ ಖಾಯಂ ನೌಕರಿ ಜಾರಿಯಾಗಬೇಕು ಎಂಬ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸಲಾಗುತ್ತಿದೆ.
ಗಾರ್ಮೆಂಟ್ಸ್, ಬ್ಯಾಂಕ್ ವ್ಯವಹಾರ ಸ್ಥಗಿತ, ಅಂಚೆ ಕಚೇರಿ, ಎಲ್ ಐಸಿ, ಬಿಎಸ್ ಎನ್ ಎಲ್, ಇನ್ಶುರೆನ್ಸ್ ಆಫಿಸ್, ಪಿಎಫ್ ಕಚೇರಿ, ಕಲ್ಲಿದ್ದಲು ಗಣಿ, ವಿಮಾ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.
ಬಸ್ , ಮೆಟ್ರೋ , ರೈಲು, ಆಟೋ ಖಾಸಗಿ ಬಸ್, ಶಾಲೆ ಕಾಲೇಜು, ಹೋಟೆಲ್, ಸರ್ಕಾರಿ ಕಚೇರಿ, ಖಾಸಗಿ ಕಚೇರಿ, ಮಾರ್ಕೆಟ್, ಬೀದಿ ಬದಿ ವ್ಯಾಪಾರ, ಆರೋಗ್ಯ ಸೇವೆ ಎಂದಿನತೆ ಕಾರ್ಯ ನಿರ್ವಹಿಸಲಿವೆ.



















