ಬೆಂಗಳೂರು: ಉಗ್ರರ ಗುಂಡಿಗೆ ಬಲಿಯಾಗಿರುವ ಭರತ್ ಭೂಷಣ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಇಲ್ಲಿನ ಹೆಬ್ಬಾಳ ಚಿತ್ತಾಗಾರದಲ್ಲಿ ಭರತ್ ಭೂಷಣ್ ಅಂತ್ಯಕ್ರಿಯೆ ನಡೆದಿದೆ. ಪೊಲೀಸ್ ಸಕಲ ಗೌರವಗಳೊಂದಿಗೆ ಮೃತ ಭಾರತ್ ಭೂಷಣ್ ಗೆ ಅಂತಿಮ ವಿಧಿ – ವಿಧಾನ ನಡೆಯಿತು.
ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮುನಿರತ್ನ, ವಿ. ಸೋಣ್ಣ ಸೇರಿದಂತೆ ಹಲವರು ಚಿತಾಗಾರಕ್ಕೆ ಆಗಮಿಸಿದ್ದರು.
ಇಂದು ಭರತ್ ಭೂಷಣ್ ಅವರ ಪಾರ್ಥಿವ ಶರೀರ ನಗರಕ್ಕೆ ಆಗಮಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಶಾಸಕ ಮುನಿರತ್ನ ಸೇರಿದಂತೆ ಹಲವು ನಾಯಕರು ತೆರಳಿ ಅಂತಿಮ ನಮನ ಸಲ್ಲಿಸಿದರು.
ಹೆಬ್ಬಾಳ ಚಿತಾಗಾರದಲ್ಲಿ ಮಧ್ಯಾಹ್ನ ಅಂತಿಮ ಸಂಸ್ಕಾರ ನಡೆಯಿತು. ವಿದ್ಯುತ್ ಚಿತಾಗಾರಕ್ಕೆ ಭರತ್ ಭೂಷಣ್ ಪಾರ್ಥಿವ ಶರೀರ ನೀಡಲಾಯಿತು. ಅಂತಿಮ ವಿಧಿ ವಿಧಾನವನ್ನು ಭರತ್ ಭೂಷಣ್ ಅವರ ಅಣ್ಣಾ ಪ್ರೀತಮ್ ನೆರವೇರಿಸಿದರು. ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನಡೆದವು.