ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮತ್ತಿಕೆರೆಯಲ್ಲಿ ಭಯೋತ್ಪಾದಕ ರ ಗುಂಡಿನ ದಾಳಿಗೆ ಬಲಿಯಾದ ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದರು.
ಉಗ್ರರ ದಾಳಿಗೆ ಇಬ್ಬರು ಕನ್ನಡಿಗರು ಬಲಿಯಾಗಿದ್ದು, ಇಂದು ಬೆಂಗಳೂರಿನಲ್ಲಿ ಕನ್ನಡಿಗರ ಪಾರ್ಥಿವ ಶರೀರ ರಾಜ್ಯಕ್ಕೆ ಆಗಮಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭರತ್ ಭೂಷಣ್ ಪಾರ್ಥಿವ ಶರೀರಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಅಂತಿಮ ನಮನ ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆ ಪಾರ್ಥೀವ ಶರೀರದ ಮುಂದೆ ಪತ್ನಿ, ಸಂಬಧಿಕರು ಕಣ್ಣೀರು ಸುರಿಸಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ನಿವಾಸದಲ್ಲಿ ಮಡುಗಟ್ಟಿದ ಶೋಕ ಮುಗಿಲು ಮುಟ್ಟಿತ್ತು. ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.
ಸಚಿವ ಸೋಮಣ್ಣ ಜೊತೆ ಕುಟುಂಬಸ್ಥರು ಮತ್ತು ಮೃತದೇಹಗಳು ಬೆಂಗಳೂರಿಗೆ ಆಗಮಿಸಿವೆ. ರಾತ್ರಿ 3:45ಕ್ಕೆ ಬೆಂಗಳೂರಿಗೆ ಮೃತದೇಹಗಳು ವಿಶೇಷ ವಿಮಾನದಲ್ಲಿ ಆಗಮಿಸಿವೆ. ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಅಧಿಕಾರಿಗಳು ಏರ್ ಪೋರ್ಟ್ ಗೆ ತೆರಳಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದ್ದಾರೆ.