ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಹೋಗದಂತೆ ನಟ ದರ್ಶನ್ಗೆ (Darshan) ವಿಧಿಸಿದ್ದ ಷರತ್ತು ಸಡಿಲಗೊಂಡಿದೆ. ಹೀಗಾಗಿ ಇನ್ನೂ ಮುಂದೆ ದರ್ಶನ್ ದೇಶಾದ್ಯಂತ ಎಲ್ಲಿ ಬೇಕಾದರೂ ಸಂಚಾರ ಮಾಡಬಹುದು.
ಹೈಕೋರ್ಟ್ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ದೇಶಾದ್ಯಂತ ಓಡಾಡಲು ಅವಕಾಶ ನೀಡಿದೆ. ಆದರೆ, ವಿದೇಶಕ್ಕೆ ಹೋಗುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಹೈಕೋರ್ಟ್ಗೆ ದರ್ಶನ್ ಕೊಟ್ಟ ಕಾರಣಗಳೇನು?
- ನಾನೊಬ್ಬ ನಟ ಹಾಗೂ ಮೈಸೂರಿನ ಖಾಯಂ ನಿವಾಸಿ
- ವೃತ್ತಿಪರ ಕಾರಣಗಳು, ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಹೊರಗೆ ಹೋಗುವುದು ಅವಶ್ಯವಿರುತ್ತದೆ
- ಕೋರ್ಟ್ ವಿಚಾರಣಾ ನ್ಯಾಯಲಯದ ವ್ಯಾಪ್ತಿ ಬಿಡದಂತೆ ಷರತ್ತು ವಿಧಿಸಿದೆ
- ವಿಚಾರಣಾ ನ್ಯಾಯಾಲಯದಲ್ಲಿ ಪ್ರತಿ ಬಾರಿ ಅನುಮತಿ ಪಡೆಯುವುದು ಕಠಿಣವಾಗಿದೆ
- ಕೇವಲ ರಾಜ್ಯದ ಹೊರಗೆ ಹೋಗುವುದಲ್ಲದೇ ವಿದೇಶಕ್ಕೆ ಹೋಗುವುದು ಅವಶ್ಯವಿದೆ ಎಂದು ಹೇಳಿದ್ದರು. ಸದ್ಯ ದರ್ಶನ್ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್ ಏಕಸದಸ್ಯ ಪೀಠ, ದೇಶದಾದ್ಯಂತ ಓಡಾಡಲು ಅನುಮತಿ ನೀಡಿ ಆದೇಶ ನೀಡಿದೆ.