ಬೆಂಗಳೂರು: ನಗರದಲ್ಲಿ ದಿನೇ ದಿನೇ ಬೈಕ್ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಭಯಭೀತರಾಗಿದ್ದಾರೆ.
ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಹ್ಯಾಂಡಲ್ ಮುರಿದು ಖದೀಮರು ಬೈಕ್ ಹೊತ್ತೊಯ್ದಿದ್ದಾರೆ. ಈ ಘಟನೆ ನಗರದ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಆರಾಧನ ಲೇಔಟ್ ನಲ್ಲಿ ನಡೆದಿದೆ.
ಎರಡು ದಿನಗಳಿಂದ ಹಲವು ಕಡೆಗಳಲ್ಲಿ ಕಳ್ಳತನ ಮಾಡಲಾಗಿದ್ದು, ರಸ್ತೆ ಬದಿ ನಿಲ್ಲಿಸಿರುವ ಬೈಕ್ ಗಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಸದ್ಯ ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.