ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ಜನಗಣತಿ ಮಾಡಲು ಇಷ್ಟವಿಲ್ಲದಿದ್ದರೂ ಜನರ ಒತ್ತಡಕ್ಕೆ ಮಣಿದು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಜಾತಿಗಣತಿ (Caste Census) ಮಾಡುವ ಘೋಷಣೆಯನ್ನು ಕೇಂದ್ರ ಸರ್ಕಾರ ಮಾಡಿದ್ದು, ರಾಹುಲ್ ಗಾಂಧಿ ಇಡೀ ದೇಶದಲ್ಲಿ ಓಡಾಟ ಮಾಡಿದರು. ಏಪ್ರಿಲ್ 16, 2023 ರಂದು ನಾನೇ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಜಾತಿಗಣತಿ ಮಾಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಜಾತಿ ಗಣತಿಯನ್ನು ನೆಹರು ಅವರು ವಿರೋಧ ಮಾಡಿದ್ದರು ಅಂತ ಬಿಜೆಪಿ ಅಪ ಪ್ರಚಾರ ಮಾಡುತ್ತಿದೆ. ನೆಹರು ಇನ್ನ ವಿರೋಧ ಮಾಡಿರಲಿಲ್ಲ. ಅಂಬೇಡ್ಕರ್ ಮಾಡಿದ್ದ ಹಿಂದೂ ಕೋಡ್ ಬಿಲ್ ಜಾರಿ ಮಾಡಿದ್ದು ನೆಹರು ಅಂತ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಖಾಸಗಿ ಕಂಪನಿಗಳಲ್ಲೂ ಎಸ್ಸಿ-ಎಸ್ಟಿ ಮೀಸಲಾತಿ ಜಾರಿ ಮಾಡಬೇಕು. 50% ಮೀಸಲಾತಿ ಪ್ರಮಾಣವನ್ನ ಹೆಚ್ಚಳ ಮಾಡಬೇಕು ಎಂದು ಕೇಂದ್ರ ಬಿಜೆಪಿಗೆ ಆಗ್ರಹಿಸಿದರು.