ಬಾಗಲಕೋಟೆ : ಬೈ ಎಲೆಕ್ಷನ್ ಇಂದಿನ ವಾತಾವರಣ ಗಮನಿಸಿದ್ರೆ. ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ವಿಜಯೇಂದ್ರ, ಹಿಂದೆ ಶಿರಾ, ಕೆ.ಅರ್.ಪೇಟೆಯಲ್ಲಿ ಕಾಂಗ್ರೆಸ್ ತಂತ್ರ ಕುತಂತ್ರ ಮಾಡಿದ್ದು ನೋಡಿದ್ದೇನೆ. ಸಿಎಂ ಸೇರಿ ಸಚಿವ ಸಂಪುಟದ ಸದಸ್ಯರೆಲ್ಲ ಝಂಡಾ ಊರ್ತಾರೆ.ಸೂಟಕೇಸ್ ಅಲ್ಲ ಗೋಣಿಚೀಲದಲ್ಲಿ ಹಣ ತರ್ತಾರೆ, ಬಡವಿರೋಧಿ, ದಲಿತ ವಿರೋಧಿ , ಯುವಕರ ವಿರೋಧಿ ಸರ್ಕಾರವಿದು ಎಂದು ಕಿಡಿಕಾರಿದ್ದಾರೆ.
ನಾಲಾಯಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನ ಬೇಸತ್ತಿದ್ದಾರೆ. ಆಡಳಿತ ಪಕ್ಷ ಏನೇ ಹರಸಾಹಸ ಮಾಡಿದ್ರು. ಬಾಗಲಕೋಟೆ, ದಾವಣಗೆರೆಯಲ್ಲಿ ನಮ್ಮ ಗೆಲವು ತಡೆಯಲು ಸಾದ್ಯವಿಲ್ಲ. ಯಾವುದೇ ಕ್ಷಣ ನಮ್ಮ ಕಾರ್ಯಕರ್ತರು ಮೈಮರೆಯಬಾರದು. ಮತ ಹಾಕೋ ಕೊನೆಯ ದಿನದವರೆಗೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದಿದ್ದಾರೆ.
ನಾನು ನಿನ್ನೆ ಬೆಂಗಳೂರಿನಿಂದ ಬಂದಿದ್ದೇನೆ.ಯಡಿಯೂರಪ್ಪನವರ ಆಶೀರ್ವಾದ ಪಡೆದುಕೊಂಡು ಬಂದಿದ್ದೇನೆ. ಯಡಿಯೂರಪ್ಪನವರ ಇಟ್ಟ ಗುರಿ, ದಿಟ್ಟ ಹೆಜ್ಜೆ ತಪ್ಪಿಲ್ಲ. ಕ್ಷೇತ್ರದಲ್ಲಿ ಇದ್ದ ಸಣ್ಣಪುಟ್ಟ ಗೊಂದಲ ಬಗೆಹರಿಸ್ತೇವೆ. ಎಲ್ಲ ನಾಯಕರು ಒಗ್ಗಟ್ಟಾಗಿ ಚರಂತಿಮಠರ ಗೆಲುವಿಗೆ ಹೋರಾಟ ಮಾಡ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ರಾಜ್ಯ ಸರ್ಕಾರಕ್ಕೆ ಬಿಸಿ ತುಪ್ಪವಾದ ಒಳ ಮೀಸಲಾತಿ.. ಸಿಎಂ ತವರೂರಲ್ಲೇ ಸರ್ಕಾರ ವಿರುದ್ಧ ಹೋರಾಟ!


















