ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿಯವರು ಬೇಕಾದ್ರೆ ಕೋರ್ಟ್ಗೆ ಹೋಗಲಿ. ಈ ಪ್ರಕರಣದಲ್ಲಿ ಈಗಾಗಲೇ ಲೋಕಾಯುಕ್ತರು ತನಿಖೆ ನಡೆಸಿ ವರದಿ ಕೊಟ್ಟಿದ್ದಾರೆ. ಸಿಬಿಐಗೆ ಕೊಡುವ ವಿಚಾರದಲ್ಲಿ ಈಗಾಗಲೇ ಕೋರ್ಟ್ ಆದೇಶ ನೀಡಿದೆ. ಬಿಜೆಪಿಯವರು ಲೋಕಾಯುಕ್ತ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸುತ್ತಿದ್ದಾರೆ. ಇವರಿಗೆ ಅನುಕೂಲ ಆದಾಗ ಎಲ್ಲವೂ ಸರಿ ಇರುತ್ತದೆ. ಇಲ್ಲದಿದ್ದರೆ ಸರಿ ಇರೋದಿಲ್ಲ ಅಂದ್ರೆ ಹೇಗೆ?
ಬಿಜೆಪಿಯವರು ಬೇಕಾದರೆ ಕೋರ್ಟ್ ಗೆ ಹೋಗಲಿ. ಲೋಕಾಯುಕ್ತ ಸ್ವತಂತ್ರ ಸಂಸ್ಥೆ. ಅವರದೇ ಆದ ತನಿಖೆ ನಡೆಯುತ್ತದೆ. ಸರ್ಕಾರದ ಅಡಿಯಲ್ಲಿ ಲೆಕ್ಕಾಚಾರ ಲೋಕಾಯುಕ್ತ ಕೆಲಸ ಮಾಡುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.