ಬೆಂಗಳೂರು: ವಿಧಾನಸಭೆಯಿಂದ 18 ಮಂದಿ ಬಿಜೆಪಿ ಶಾಸಕರ ಅಮಾನತು ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ.
ನಾಳೆ ಬೆಳಿಗ್ಗೆ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂಭಾಗ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 10 ಘಂಟೆಗೆ ಪ್ರತಿಭಟನೆ ನಡೆಸಲಾಗುತ್ತಿದೆ.
ನಾಳೆ ಬೆಳಿಗ್ಗೆ 18 ಶಾಸಕರ ಅಮಾನತು ತಕ್ಷಣವೇ ಹಿಂಪಡೆಯುವಂತೆ ಸಭಾಧ್ಯಕ್ಷರ ಮೇಲೆ ಒತ್ತಡ ಹೇರಲು ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಬಿಜೆಪಿಯ ವಿಧಾನಸಭೆಯ ಎಲ್ಲಾ ಶಾಸಕರುಗಳು ಹಾಗೂ ವಿಧಾನಪರಿಷತ್ನ ಸದಸ್ಯರುಗಳು ಭಾಗಿಯಾಗಲಿದ್ದಾರೆ.