ಬೆಂಗಳೂರು: ಇತ್ತೀಚೆಗಷ್ಟೇ ಕಾಂಗ್ರೆಸ್ (Congress) ಡಿನ್ನರ್ ಪಾಲಿಟಿಕ್ಸ್ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಬಿಜೆಪಿಯಲ್ಲಿಯೂ (BJP) ಡಿನ್ನರ್ ಪಾಲಿಟಿಕ್ಸ್ ಟ್ರೆಂಡ್ ಆಗುತ್ತಿದೆ.
ನಾಳೆ (ಜ.10) ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೋಜನ ಕೂಟ ಆಯೋಜಿಸಿದ್ದಾರೆ. ಮಧ್ಯಾಹ್ನ 12ಕ್ಕೆ ಈ ಸಭೆ ನಡೆಯಲಿದೆ. ಈ ಸಭೆಗೆ ವಿಜಯೇಂದ್ರ, ಮಾಜಿ ಶಾಸಕರು ಮತ್ತು ಮಾಜಿ ಸಂಸದರನ್ನು ಆಹ್ವಾನಿಸಿದ್ದಾರೆ.
ಸಭೆಯಲ್ಲಿ ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ತಯಾರಿ ಕುರಿತು ಚರ್ಚೆ ನಡೆಸಲಿದ್ದಾರೆ. ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆ ಕುರಿತು ಚರ್ಚಿಸಲಿದ್ದಾರೆ. ಈ ಮೂಲಕ ಮಾಜಿ ಶಾಸಕರ ವಿಶ್ವಾಸ ಗಳಿಸಲು ವಿಜಯೇಂದ್ರ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ನಂತೆ ಬಿಜೆಪಿಯಲ್ಲಿನ ಡಿನ್ನರ್ ಪಾರ್ಟಿ ಕೂಡ ದೊಡ್ಡ ಆಕ್ರೋಶ ಹಾಗೂ ವಿರೋಧಕ್ಕೆ ಕಾರಣವಾಗಲಿದೆಯಾ ಎಂಬುವುದನ್ನು ಕಾಯ್ದು ನೋಡಬೇಕಿದೆ.