ವಿಜಯನಗರ: ಗಂಡನಿಂದ ದೂರವಿದ್ದ ವಿವಾಹಿತ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ರೈಲ್ವೆ ಸ್ಟೇಷನ್ ರಸ್ತೆಯ ಚಾಪಲಗಡ್ಡ ಪ್ರದೇಶ ನಡೆದಿದೆ.
ಉಮಾ( 28) ಕೊಲೆಯಾದ ಮಹಿಳೆ. ಉಮಾ ಮದುವೆಯಾದ ಬಳಿಕ ಕಳೆದ ಆರು ವರ್ಷಗಳಿಂದ ಗಂಡ ರಘುಮೂರ್ತಿ ಅವರಿಂದ ದೂರವಿದ್ದು, ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದಳು ಎನ್ನಲಾಗಿದೆ. ಉಮಾಗೆ ಮೂವರು ಚಿಕ್ಕ ಮಕ್ಕಳು ಇದ್ದು, ತಾಯಿ ಕಳೆದುಕೊಂಡ ಮಕ್ಕಳ ಭವಿಷ್ಯದ ಕುರಿತು ಆತಂಕ ಮೂಡಿದೆ.
ಅಪರಿಚಿತ ವ್ಯಕ್ತಿಗಳು ಉಮಾಳ ಕತ್ತನ್ನು ಕೊಯ್ದು ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಕೊಲೆ ನಡೆದ ರೀತಿ ನೋಡಿದರೆ ಇದು ಪೂರ್ವನಿಯೋಜಿತ ಕೃತ್ಯವಾಗಿರಬಹುದೆಂದು ಶಂಕಿಸಲಾಗಿದೆ. ಯಾವ ಕಾರಣಕ್ಕೆ ಯಾರು ಕೊಲೆ ಮಾಡಿದ್ದಾರೆ ಎಂದು ಇನ್ನು ತಿಳಿದುಬಂದಿಲ್ಲ. ಸದ್ಯ ಪೊಲೀಸರು ಕೊಲೆ ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.
ಈ ಸಂಬಂಧ ವಿಜಯನಗರ ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ್, ಹೊಸಪೇಟೆ ಡಿವೈಎಸ್ಪಿ ಡಾ. ಮಂಜುನಾಥ್ ತಳವಾರ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನೆಡಿಸಿದ್ದಾರ. ಈ ಸಂಬಂಧ ಹೊಸಪೇಟೆಯ ಚಿತ್ತವಾಡ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಇದನ್ನೂ ಓದಿ: ಧಾರವಾಡ | ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ.. ಮೂರು ಅಂಗಡಿಗಳು ಸುಟ್ಟು ಭಸ್ಮ



















