ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾಗಿದ್ದ ಕನ್ನಡಿಗರ ಶವ ರಾಜ್ಯಕ್ಕೆ ಆಗಮಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರಿಗೆ ಭರತ್ ಭೂಷಣ್ ಪಾರ್ಥಿವ ಶರೀರ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪಾರ್ಥೀವ ಶರೀರದ ಮುಂದೆ ಪತ್ನಿ, ಸಂಬಧಿಕರು ಕಣ್ಣೀರು ಸುರಿಸಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ನಿವಾಸದಲ್ಲಿ ಮಡುಗಟ್ಟಿದ ಶೋಕ ಮುಗಿಲು ಮುಟ್ಟಿತ್ತು. ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.
ಜಮ್ಮುಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಕನ್ನಡಿಗರ ಬಲಿಯಾಗಿದ್ದರು. ಈಗ ಸಚಿವ ಸೋಮಣ್ಣ ಜೊತೆ ಕುಟುಂಬಸ್ಥರು ಮತ್ತು ಮೃತದೇಹಗಳು ಬೆಂಗಳೂರಿಗೆ ಆಗಮಿಸಿವೆ. ರಾತ್ರಿ 3:45ಕ್ಕೆ ಬೆಂಗಳೂರಿಗೆ ಮೃತದೇಹಗಳು ವಿಶೇಷ ವಿಮಾನದಲ್ಲಿ ಆಗಮಿಸಿವೆ.
ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಅಧಿಕಾರಿಗಳು ಏರ್ ಪೋರ್ಟ್ ಗೆ ತೆರಳಿದ್ದರು. ಮೃತ ಮಂಜುನಾಥ್ ಪತ್ನಿ, ಮಗ ಮತ್ತು ಜೊತೆಯಲ್ಲಿದ್ದವರನ್ನು ಬರಮಾಡಿಕೊಳ್ಳಲು ಆಗಮಿಸಿದ್ದರು. ಕೆಂಪೇಗೌಡ ಏರ್ ಪೋರ್ಟ್ ನಿಂದ ರಸ್ತೆ ಮೂಲಕ ಶಿವಮೊಗ್ಗಕ್ಕೆ ಮಂಜುನಾಥ್ ರಾವ್ ಮೃತದೇಹ ಸಾಗಿಸಲಾಯಿತು.