ತುಮಕೂರು: ಶೌಚಾಲಯಕ್ಕೆ ತೆರಳಿದ್ದಾಗ ವಿದ್ಯುತ್ ಶಾಕ್ ಹೊಡೆದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸೋಮನಹಳ್ಳಿಯಲ್ಲಿ ನಡೆದಿದೆ.
ಸೋಮನಹಳ್ಳಿ ಗ್ರಾಮದ ಮಹೇಶ್ ಎಂಬುವವರ ಪುತ್ರ ಕುಶಾಲ್ (9) ಸಾವನ್ನಪ್ಪಿದ ಬಾಲಕ ಎನ್ನಲಾಗಿದೆ. ನಿನ್ನೆ ರಾತ್ರಿ ಮನೆ ಬಳಿ ಶೌಚಾಲಯಕ್ಕೆ ಬಾಲಕ ತೆರಳಿದ್ದ ಸಂದರ್ಭದಲ್ಲಿ ಮನೆ ಬಳಿ ಹಾದು ಹೋಗಿರುವ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ. ಬಾಲಕನ ಸಾವಿಗೆ ಬೆಸ್ಕಾಂ ಹಾಗೂ ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯವೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಹಲವು ಬಾರಿ ವಿದ್ಯುತ್ ತಂತಿ ಸರಿಪಡಿಸುವಂತೆ ಮನವಿ ಮಾಡಿದ್ದರು ಕೂಡ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಂಕ್ರದನ ಮುಗಿಲು ಮುಟ್ಟಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.