ಬೆಂಗಳೂರು : ನಗರದ ಚಿಕ್ಕಬಾಣವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ನಾಲ್ವರು ಸೇರಿ ಚಾಕುವಿನಿಂದ ಚುಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾಗಿರುವ ವ್ಯಕ್ತಿಯನ್ನು ಸಯ್ಯದ್ ಸಫಿ ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಎಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ನಾಲ್ವರು ಆರೋಪಿಗಳು ಸಯ್ಯದ್ ಸಫಿ ಅವರ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಬಳಿಕ ಚಾಕುವಿನಿಂದ ನಿರಂತರವಾಗಿ ಚುಚ್ಚಿ ಹತ್ಯೆ ಮಾಡಿದ್ದಾರೆ.
ಘಟನೆ ಸಂಬಂಧ ಚಿಕ್ಕಬಾಣವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈಗಾಗಲೇ ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಕೊಲೆ ಹಿಂದೆ ನಿಖರ ಕಾರಣ ಏನು, ವೈಯಕ್ತಿಕ ದ್ವೇಷವೋ ಅಥವಾ ಬೇರೆ ಕಾರಣಗಳಿವೆಯೋ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಘಟನೆಯ ನಂತರ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.
ಇದನ್ನೂ ಓದಿ : ವಾಹನ ಸವಾರರಿಗೆ ಬಿಗ್ ಶಾಕ್ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ.. ಬೆಂಗಳೂರಲ್ಲಿ ಎಷ್ಟಿದೆ ರೇಟ್?



















