ಮಂಡ್ಯ : ಹೆದ್ದಾರಿಯಲ್ಲಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಟೂರಿಸ್ಟ್ ಬಸ್ ಹೊತ್ತಿ ಉರಿದ ಘಟನೆ ನಡೆದಿದೆ.
ಮಂಡ್ಯದ ನಾಗಮಂಗಲದ ಕದಬಹಳ್ಳಿ ಟೋಲ್ ಬಳಿ ಈ ಘಟನೆ ನಡೆದಿದೆ. ಉಡುಪಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ರೇಷ್ಮಾ ಟ್ರಾವೆಲ್ಸ್ ಟೂರಿಸ್ಟ್ ಬಸ್ ಗೆ ಬೆಂಕಿ ತಗುಲಿದೆ.
ಚಾಲಕನ ಸಮಯ ಪ್ರಜ್ಞೆಯಿಂದಾಗಿ 25ಕ್ಕೂ ಅಧಿಕ ಜನ ಪ್ರಯಾಣಿಕರು ಬದುಕುಳಿದಿದ್ದಾರೆ. ಇದ್ದಕ್ಕಿಂತೆ ಚಲಿಸುತ್ತಿದ್ದ ಬಸ್ ನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಚಾಲಕ ಕೆಳಗೆ ಇಳಿಸಿದ್ದಾನೆ. ಇದರಿಂದಾಗಿ ಪ್ರಯಾಣಿಕರು ಪ್ರಾಣ ಉಳಿಸಿಕೊಂಡಿದ್ದಾರೆ.
ಬಸ್ ನಿಲ್ಲಿಸುತ್ತಿದ್ದಂತೆ ಹೊತ್ತಿ ಉರಿದ ಬಸ್ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.