ಬೈಂದೂರು : ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ ಐತಿಹಾಸಿಕ ಧಾರ್ಮಿಕ ಮಹೋತ್ಸವವಾಗಿ ವಿಜೃಂಭಣೆಯಿಂದ ಸಾಗುತ್ತಿದ್ದು, ಇದೀಗ ಸಮಾರೋಪದತ್ತ ತಲುಪಿದೆ. ಹಿಂದೂ ಸಮಾಜದಲ್ಲಿ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಮತ್ತಷ್ಟು ಹೆಚ್ಚಾಗಬೇಕು ಎಂದು ಗಣ್ಯರು ಅಭಿಪ್ರಾಯಪಟ್ಟಿದ್ದು, ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿರುವ ಶಾಸಕ ಗುರುರಾಜ್ ಗಂಟಿಹೊಳೆ ಅವರನ್ನು ಅಭಿನಂದಿಸಿದ್ದಾರೆ.

ಚಾತುರ್ಮಾಸ್ಯದ ಪ್ರಾಮುಖ್ಯತೆಯಿಂದಾಗಿ ರಾಜ್ಯದ ವಿವಿಧೆಡೆಯಿಂದ ರಾಜಕಾರಣಿಗಳು, ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರು ಸೇರಿದಂತೆ ಸಾವಿರಾರು ಭಕ್ತರು ಆಗಮಿಸಿ ಶ್ರೀಗಳ ದಿವ್ಯ ಆಶೀರ್ವಾದ ಪಡೆಯುತ್ತಿರುವುದು ಕಾರ್ಯಕ್ರಮದ ವಿಶೇಷತೆಯಾಗಿದೆ.

ಸೆಪ್ಟೆಂಬರ್ 6ರಂದು ಕರ್ನಾಟಕ ವಿಧಾನಸಭೆ ಉಪಸಭಾಪತಿ ಮಾಂಕಾಳ್ ವೈದ್ಯ, ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ, ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ್ ಶೆಟ್ಟಿ, ಸೂರಜ್ ಸೋನಿ, ಹೆಚ್.ಆರ್. ನಾಯಕ್ ಸೇರಿದಂತೆ ಪ್ರಮುಖ ಮುಖಂಡರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಒಟ್ಟು 48 ದಿನಗಳ ಈ ಮಹಾವ್ರತದಲ್ಲಿ ಇದೀಗ ಒಂದು ವಾರ ಮಾತ್ರ ಬಾಕಿ ಉಳಿದಿದೆ. ಇದೇ ಸೆಪ್ಟೆಂಬರ್ 14ರಂದು ಸೀಮೋಲ್ಲಂಘನದೊಂದಿಗೆ ಪರಮಪೂಜ್ಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸಮಸ್ತ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಗಳ ಆಶೀರ್ವಾದ ಹಾಗೂ ಕೃಪೆಗೆ ಪಾತ್ರರಾಗುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : 215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು



















