ಬೆಂಗಳೂರು: ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್ ಮೇಲೆ ಕಾರು ಹತ್ತಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.
ಅರಮನೆ ಮುಖ್ಯ ರಸ್ತೆಯ ಮಹಾರಾಣಿ ಕಾಲೇಜ್ ಬಸ್ ನಿಲ್ದಾಣದ ಎದುರು ಈ ಘಟನೆ ನಡೆದಿದೆ. ಘಟನೆಯಲ್ಲಿ ಯೆಲ್ಲೋ ಬೋರ್ಡ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆ ಗೊಂದಲದಿಂದ ತಿರುವು ಪಡೆಯುವಾಗ ಅವಘಡ ಸಂಭವಿಸಿದೆ. ಘಟನೆ ವೇಳೆ ಕಾರಿನಲ್ಲಿ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಅದೃಷ್ಟವಶಾತ್ ಅವಾಂತರ ತಪ್ಪಿದಂತಾಗಿದೆ. ಚಾಲಕ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.