ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಶಾಸಕ ಮುನಿರತ್ನ ನೀಡಿದ ದೂರು ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ. ಒಳಸಂಚು ರೂಪಿಸಿ ಹಲ್ಲೆ ಮತ್ತು ಕೊಲೆ ಮಾಡುವ ಉದ್ದೇಶದಿಂದ ಮೊಟ್ಟೆ ಎಸೆದಿದ್ದಾರೆಂದು ಮುನಿರತ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇನ್ನೊಂದೆಡೆ ಮೊಟ್ಟೆ ಎಸೆದವರು ಎಂಬ ಆರೋಪ ಹೊತ್ತವರಿಂದಲೂ ಪ್ರತಿದೂರು ದಾಖಲಾಗಿದೆ.
ವಿಶ್ವನಾಥ, ಕೃಷ್ಣಮೂರ್ತಿ, ಚಂದ್ರು ಮೊಟ್ಟೆ ಎಸೆದಿದ್ದಾರೆಂಬ ಆರೋಪ ಎದುರಿಸುತ್ತಿದ್ದು, ಘಟನಾ ಸ್ಥಳದಿಂದಲೇ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದರು.
ಕೊಲೆ ಮಾಡುವ ಸಂಚಿನಿಂದ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮುನಿರತ್ನ ಆರೋಪಿಸಿದ್ದರು.