ಬೆಂಗಳೂರು: ಜಾತಿ ಜನಗಣತಿ ವರದಿಯ ವಿಚಾರವಾಗಿ ಈಗಾಗಲೇ ಎಲ್ಲ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಈ ಮಧ್ಯೆ ಇದೇ ವಿಚಾರವಾಗಿ ಮುಸ್ಲಿಂ ಸಮುದಾಯ ಸಭೆ ಹಮ್ಮಿಕೊಂಡಿದೆ.
ಈ ಸಭೆಯಲ್ಲಿ ವರದಿಯ ಸಾಧಕ- ಬಾಧಕಗಳ ಕುರಿತು ಚರ್ಚೆ ನಡೆಯಿತು. ಮುಸ್ಲಿಂ ಮುಖಂಡರು ಹಾಗೂ ಧಾರ್ಮಿಕ ಗುರುಗಳು ಸಭೆಯಲ್ಲಿ ಭಾಗಿಯಾಗಿತ್ತು. ಸಚಿವ ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಸಭೆ ನಡೆಯಿತು. ಬೆಂಗಳೂರಿನ ಟ್ಯಾನರಿ ರಸ್ತೆಯ ಅರೇಬಿಕ್ ಕಾಲೇಜು ಸಭಾಂಗಣದಲ್ಲಿ ಈ ಸಭೆ ಜರುಗಿತು.
ಸಭೆಯಲ್ಲಿ ಮೌಲಾನಾ ಅಮೀರ್ ಎ ಶೆರಿಯತ್, ಮೌಲಾನಾ ಮಕ್ಸುದ್ ಇಮ್ರಾನ್, ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಜಿ ಸಚಿವ ರೋಷನ್ ಬೇಗ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ವಖ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಬಾಷಾ ಸೇರಿದಂತೆ ಹಲವರು ಇದ್ದರು.