ಬೆಂಗಳೂರು: ಜಾತಿ ಗಣತಿ ವರದಿ (caste census Report) ಕುರಿತು ಸಚಿವ ಸಂಪುಟ (Karnataka cabinet Meeting ) ನಡೆದಿದ್ದು, ಕೋಲಾಹಲವೇ ಸೃಷ್ಟಿಯಾಗಿದೆ.
ಆದರೆ, ಈ ಕುರಿತು ಯಾವ ನಿರ್ಧಾರ ಹೊರ ಬಿದ್ದಿಲ್ಲ. ಜಾತಿ ಗಣತಿ ವರದಿ ಜಾರಿ ಕುರಿತು ಕರೆಯಲಾಗಿದ್ದ ವಿಶೇಷ ಸಂಪುಟ ಸಭೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಜಾತಿ ಗಣತಿ ವರದಿ ಜ್ವಾಲೆ ಮಧ್ಯೆ ನಡೆದ ಸಚಿವ ಸಂಪುಟಸ ಸಭೆ ಅಂತ್ಯವಾಗಿದ್ದು, ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಜಾತಿಗಣತಿ ವರದಿ ವಿಷಯ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳದೇ ಇಂದಿನ ಸಂಪುಟ ಸಭೆಯಲ್ಲಿ ಅಂತ್ಯವಾಗಿದ್ದು, ಈ ಬಗ್ಗೆ ಚರ್ಚೆಯನ್ನು ಮುಂದೂಡಿಕೆ ಮಾಡಲಾಗಿದೆ. ಸಭೆಯಲ್ಲಿ ಲಿಂಗಾಯತ ಹಾಗೂ ಒಕ್ಕಲಿಗ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ್, ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ 2025ರ ದತ್ತಾಂಶ ಅಧ್ಯಯನ ವರದಿಯನ್ನು ಇಂದು ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಲಾಯಿತು. ಈ ವಿಷಯವಾಗಿ ಚರ್ಚೆ ಮಾಡಿದ್ದೇವೆ. ಹೆಚ್ಚಿನ ಮಾಹಿತಿ ತಾಂತ್ರಿಕ ವಿವರಗಳು ಚರ್ಚೆಗೆ ಅವಶ್ಯ ಅಗತ್ಯ ಎಂದು ಅನಿಸಿದೆ. ಅವುಗಳನ್ನು ಒದಗಿಸಲು ಚರ್ಚೆ ಅಪೂರ್ಣವಾಗಿದೆ. ಸೌಹಾರ್ದವಾದ ವಾತಾವರಣದ ಚರ್ಚೆಯಲ್ಲಿ ಹಲವಾರು ವಿಷಯಗಳನ್ನು ಮಂಡಿಸಿದ್ದೇವೆ. ಸಮೀಕ್ಷೆ ಸಂದರ್ಭದಲ್ಲಿ ಏನೇನು ವಿವರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಚರ್ಚೆ ಮಾಡಲಾಗಿದೆ. ಈ ಬಗ್ಗೆ ಮೇ 2ರಂದು ನಡೆಯುವ ಸಂಪುಟ ಸಭೆಯಲ್ಲಿ ಇನ್ನಷ್ಟು ಚರ್ಚೆ ನಡೆಯಲಿದೆ ಎಂದರು.
ಕ್ಯಾಬಿನೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಮೊದಲು ಜಾತಿ ಗಣತಿ ವರದಿ ಕುರಿತು ಸಚಿವರ ಬಳಿಕ ವೈಯಕ್ತಿಕ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದರು. ಈ ವೇಳೆ ದಲಿತ ಸಮುದಾಯದ ಸಚಿವರು, ಜಾತಿ ಗಣತಿ ನಮ್ಮ ಕಾಂಗ್ರೆಸ್ ಪಣಾಳಿಕೆಯಲ್ಲೇ ಇದೆ. ಅದು ನಮ್ಮ ಪಾಲಿಸಿ, ಜಾತಿಗಣತಿಯಿಂದ ಹಿಂದೆ ಸರಿಯೋದು ಬೇಡ ಎಂದು ಕೆಲ ದಲಿತ ಸಚಿವರು ಆಗ್ರಹಿಸಿದರು. ಲಿಂಗಾಯತ ಸಮುದಾಯದವ ಸಚಿವರು ಹಾಗೂ ಒಕ್ಕಲಿಗರ ಸಮುದಾಯದ ಸಚಿವರು ಏರು ಧ್ವನಿಯಲ್ಲಿ ವಿರೋಧಿಸಿದರು.
ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಜಾತಿ ಗಣತಿ ವರದಿಯನ್ನನು ತೀವ್ರವಾಗಿ ವಿರೋಧಿಸಿದರು. ಸಚಿವ ಸಂತೋಷ್ ಲಾಡ್, ಯಾರಿಗೆ ಅನ್ಯಾಯವಾಗಿದೆ ಸೇರಿಸಲು ಅವಕಾಶವಿದೆ ಎಂದರು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮುಸ್ಲಿಮರಲ್ಲೂ ನೂರಾರು ಉಪ ಪಂಗಡಗಳಿವೆ, ಎಲ್ಲವನ್ನೂ ಒಂದರಲ್ಲೇ ಏಕೆ ಸೇರಿಸಿದ್ದೀರಿ ಎಂದು ತೀವ್ರವಾಗಿ ಕಿಡಿ ಕಾರಿ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದರು. ಹೀಗೆ ಕ್ಯಾಬಿನೆಟ್ನಲ್ಲಿ ಯಾರೆಲ್ಲ ಜಾತಿ ಗಣತಿ ವರದಿ ಜಾರಿಗೆ ಆಕ್ಷೇಪ ಎತ್ತಿದ್ದರೋ ಅವರಿಗೆ ಲಿಖಿತ ರೂಪದಲ್ಲಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹೀಗಾಗಿ ಸಂಪುಟ ಸಭೆ ಮುಕ್ತಾಯವಾಯಿತು ಎಂದಿದ್ದಾರೆ.