ರಣರಂಗವಾಗಿ ಮಾರ್ಪಟ್ಟಿದ್ದ ಭಾರತ-ಪಾಕಿಸ್ತಾನ ಗಡಿಯಲ್ಲಿ ಈಗ ಶಾಂತಿ ಮಂತ್ರ ಪಠಿಸಲಾಗ್ತಿದೆ. ಪಹಲ್ಗಾಮ್ ಪ್ರತೀಕಾರಕ್ಕೆ ಉಗ್ರರ ವಿರುದ್ಧ ಸಮರ ಸಾರಿದ್ದ ಭಾರತ ಪಾಕಿಸ್ತಾನದೊಳಗೆ ನುಗ್ಗಿ ದಾಳಿ ಮಾಡಿತ್ತು.
ಇದಾದ ಬಳಿಕ ಎರಡೂ ದೇಶಗಳು ಕದನ ವಿರಾಮದ ಮೊರೆ ಹೋಗಿದ್ವು. ಈ ಕದನ ವಿರಾಮವನ್ನೀಗ ಮೇ 18ರವರೆಗೂ ಮುಂದುವರಿಸಲು ನಿರ್ಧರಿಸಲಾಗಿದೆ. ಭಾರತ-ಪಾಕಿಸ್ತಾನ ಡಿಜಿಎಂಓಗಳ ಸಭೆಯಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಗಿದೆ.
ಹಾಟ್ ಲೈನ್ ಮೂಲಕ ನಡೆದ ಈ ಸಭೆಯಲ್ಲಿ ಉಭಯ ದೇಶಗಳು ಮೇ 18ರವರೆಗೂ ಕದನ ವಿರಾಮ ಮುಂದುವರಿಸುವ ಒಮ್ಮತದ ತೀರ್ಮಾನ ಕೈಗೊಂಡಿದ್ದಾರೆ. ಈ ಬಗ್ಗೆ ಪಾಕ್ ವಿದೇಶಾಂಗ ಸಚಿವ ಇಶಾಕ್ ಧರ್ ಸ್ಪಷ್ಟನೆ ನೀಡಿದ್ದಾರೆ.