ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸುಳ್ಯದ ಶಿಲ್ಪಿ ಕುರುಂಜಿ ವೆಂಕಟ್ರಮಣ ಗೌಡರ ಪುತ್ರ ಡಾ. ಕೆ.ವಿ. ರೇಣುಕಾಪ್ರಸಾದ್ ಕುರುಂಜಿ ಬೆಳ್ಳಿ ರಥ ಸಮರ್ಪಿಸಲಿದ್ದಾರೆ. 1 ಕೋಟಿ ರೂ. ಮೌಲ್ಯದಲ್ಲಿ ರಥ ನಿರ್ಮಾಣಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ ಹೇಳಿದ್ದಾರೆ.
ಬೆಳ್ಳಿ ರಥ ನಿರ್ಮಾಣಕ್ಕೆ ದೇವಳದಲ್ಲಿ ಅವರು ಸಂಕಲ್ಪ ಮಾಡಲಿದ್ದಾರೆ. ಬಳಿಕ ರಥ ನಿರ್ಮಾಣ ಕಾರ್ಯ ಆರಂಭವಾಗಲಿದೆ. ರಥವನ್ನು ಕುಕ್ಕೆ ದೇವಳದ ಬ್ರಹ್ಮರಥ ನಿರ್ಮಿಸಿದ ರಾಜಗೋಪಾಲ ಆಚಾರ್ಯ ಕೋಟೇಶ್ವರ ನಿರ್ಮಾಣ ಮಾಡಲಿದ್ದಾರೆ ಎಂದಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ರಾಜ್ಯದಲ್ಲಿ ಖ್ಯಾತಿ ಪಡೆದ ದೇವಸ್ಥಾನವಾಗಿದೆ. ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಭಕ್ತರು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಮಾಡುತ್ತಾರೆ. ಈ ದೇವಸ್ಥಾನವು ಸರ್ಪ ದೋಷಗಳನ್ನು ನಿವಾರಿಸುವುದಕ್ಕೆ, ಚರ್ಮ ರೋಗಗಳನ್ನು ಶಮನ ಮಾಡುವುದಕ್ಕೆ ಹೆಸರುವಾಸಿ. ಹಲವಾರು ರಹಸ್ಯಗಳನ್ನು ಕೂಡ ಈ ದೇವಸ್ಥಾನ ಹೊಂದಿದೆ.