ಮಹಿಳಾ ಆಯೋಗದ ರಾಜ್ಯಾಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸರ್ಕಾರಿ ಆಸ್ಪತ್ರೆ ಅವ್ಯವಸ್ಥಿತ ಬಗ್ಗೆ DHO ಹಾಗೂ DS ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಧ್ಯಕ್ಷರ ಕಣ್ಣೆದುರೆ ಮೆಡಿಸಿನ್ ಇಲ್ಲ ಎಂದು ಸಿಬ್ಬಂದಿ ಮರಳಿ ಕಳುಹಿಸಿದ್ದನ್ನು ಕಂಡು ಕೆಂಡಾಮಂಡಲವಾಗಿದ್ದಾರೆ. ಇದಕ್ಕೆ ತೀವ್ರ ಆಕ್ರೋಶಗೊಂಡ ಅಧ್ಯಕ್ಷೆ, DS ನಾಗೇಂದ್ರಪ್ಪ, DHO ಷಣ್ಮುಖಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೇ,ಶುದ್ದ ಕುಡಿಯುವ ನೀರಿನ ಘಟಕ, ಸ್ವಚ್ಚತೆ ಇಲ್ಲದಿರುವುದಕ್ಕೆ ಹಾಗೂ ಮೆಡಿಸಿನ್ ಕೊರತೆಯಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.