ಚಿತ್ರದುರ್ಗ : ತಾಯಿ ಖರ್ಚಿಗೆ ಹಣ ಕೊಟ್ಟಿಲ್ಲ ಎಂದು ಮಗ ಬೆಂಕಿ ಹಚ್ಚಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ನನ್ನಿವಾಳ ರಸ್ತೆಯಲ್ಲಿ ನಡೆದಿದೆ.
ಮಹೇಶ್ (34) ಬೆಂಕಿ ಹಚ್ಚಿಕೊಂಡ ಯುವಕ. ಮಹೇಶ್ನ ತಾಯಿ ಗಂಗಮ್ಮ ಜಮೀನು ಮಾರಾಟ ಮಾಡಿದ್ದರು. ಕಳೆದ ವಾರವಷ್ಟೇ ತಾಯಿ ಬಳಿ ಪುತ್ರ ಕಾರು ಖರೀದಿಗೆ 4 ಲಕ್ಷ ಹಣ ಪಡೆದಿದ್ದ. ಈಗ ಮತ್ತೆ 2 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ. ಹಾಗಾಗಿ ಹಣ ನೀಡುವುದಕ್ಕೆ ನಿರಾಕರಿಸಿದ್ದರು. ಇದರಿಂದ ನೊಂದ ಮಗ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.
ಕೂಡಲೇ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ಗಾಯಾಳುವನ್ನು ದಾಖಲಿಸಿದ್ದು, ಆಸ್ಪತ್ರೆ ಮುಂಭಾಗ ತಾಯಿ ಗಂಗಮ್ಮ ಕಣ್ಣೀರು ಹಾಕುತ್ತಿದ್ದಾರೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಇದನ್ನೂ ಓದಿ : ಉಡುಪಿಯಲ್ಲಿ KSRTC ಬಸ್-ಟಿಪ್ಪರ್ ನಡುವೆ ಭೀಕರ ಅಪಘಾತ.. ನಾಲ್ಕು ವಿದ್ಯಾರ್ಥಿಗಳು ಮೃತಪಟ್ಟಿರುವ ಶಂಕೆ!



















