ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಸಿಐಡಿ ತನಿಖೆ ಆರಂಭಿಸುತ್ತಿದೆ.
ಸಿಐಡಿ ಎಸ್ಪಿ ಶುಭನ್ವಿತಾ ನೇತೃತ್ವದಲ್ಲಿ ತನಿಖೆ ಆರಂಭವಾಗಲಿದೆ. ತನಿಖಾಧಿಕಾರಿಗಳಾಗಿ ಡಿವೈಎಸ್ಪಿಗಳಾದ ಗೌತಮ್ ಹಾಗೂ ಪುರುಷೋತ್ತಮ್ ನೇಮಕವಾಗಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಕೇಸ್ ಫೈಲ್ ಮಾಡಿದ್ದಾರೆ.
ತನಿಖೆ ಆರಂಭಿಸಲಿರುವ ಸಿಐಡಿ ತಂಡ ಕಾಲ್ತುಳಿತ ಉಂಟಾದ ಸ್ಥಳಕ್ಕೆ ಭೇಟಿ ನೀಡಲಿದೆ. ಕಾಲ್ತುಳಿತ ಉಂಟಾದ ಸ್ಥಳದಲ್ಲಿ ಸಿಐಡಿ ತಂಡದಿಂದ ಪರಿಶೀಲನೆ ನಡೆಸಲಿದೆ. ನೂಕು ನುಗ್ಗಲು ಉಂಟಾಗಿದ್ದ ಗೇಟ್ ನಂಬರ್ 7, 19,18, 16, 21 ರ ಬಳಿ ಪರಿಶೀಲನೆ ನಡೆಸಲಿದೆ.
ಸ್ಥಳ ಪರಿಶೀಲನೆ ಬಳಿಕ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ತಯಾರಿ ನಡೆಸಲಾಗುತ್ತದೆ ಎನ್ನಲಾಗಿದೆ. ಬಹುತೇಕ ಸೋಮವಾರ ಬಂಧಿತ ನಾಲ್ವರು ಆರೋಪಿಗಳನ್ನು ಸಿಐಡಿ ತಂಡ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಇಂದು ಸರ್ಕಾರಿ ರಜೆ ಮತ್ತು ನಾಳೆ ಭಾನುವಾರವಾದ್ದರಿಂದ ಸೋಮವಾರ ಕಸ್ಟಡಿಗೆ ಪಡೆಯಲು ಸಿದ್ದತೆ ನಡೆಸಲಾಗುತ್ತಿದೆ. ಬಾಡಿ ವಾರೆಂಟ್ ಮೇಲೆ ಸಿಐಡಿ ತಂಡ ಕಸ್ಟಡಿಗೆ ಪಡೆಯಲಿದೆ.



















