ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಕಾಲ್ತುಳಿತದಿಂದ 11 ಜನ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣ ಕೈಗೆತ್ತಿಕೊಂಡಿಸುವ ಸಿಐಡಿ ತಂಡ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿತು.
ಸಿಐಡಿ ಎಸ್ಪಿ ಶುಭನ್ವಿತಾ ನೇತೃತ್ವದಲ್ಲಿ ಕಾಲ್ತುಳಿತ ಪ್ರಕರಣದ ತನಿಖೆ ನಡೆಯುತ್ತಿದ್ದು, ಡಿವೈಎಸ್ಪಿಗಳಾದ ಗೌತಮ್ ಹಾಗೂ ಪುರುಷೋತ್ತಮ್ರನ್ನು ತನಿಖಾಧಿಕಾರಿಗಳಾಗಿ ನೇಮಿಸಲಾಗಿದೆ. ಕಾಲ್ತುಳಿತ ಉಂಟಾದ ಸ್ಥಳಕ್ಕೆ ಭೇಟಿ ನೀಡಿದ ಸಿಐಡಿ ತಂಡ, ನೂಕು ನುಗ್ಗಲು ಉಂಟಾಗಿದ್ದ ಗೇಟ್ ನಂಬರ್ 7, 19, 18, 16, 21ರ ಬಳಿ ಪರಿಶೀಲನೆ ನಡೆಸಿದೆ.