ಯಾದಗಿರಿ: ಪ್ರಜಾಸೌಧ ಅಡಿಗಲ್ಲು ಕಾರ್ಯಕ್ರಮದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಭಾಷಣದ ಸಂದರ್ಭದಲ್ಲಿ ಹಲವರು ಶಾಸಕ ಕಂದಕೂರ ಪರ ಘೋಷಣೆ ಕೂಗಿದ್ದಾರೆ. ಶಾಸಕ ಶರಣಗೌಡ ಕಂದಕೂರ ಅಭಿಮಾನಿಗಳು SNK…. SNK ಅಂತ ಘೋಷಣೆ ಕೂಗಿದ್ದಾರೆ. ಅಭಿಮಾನಿಗಳು ಘೋಷಣೆ ಕೂಗುತ್ತಿದ್ದಂತೆ ಶಾಸಕ ಕಂದಕೂರ ಮಧ್ಯೆ ಪ್ರವೇಶಿಸಿದ್ದಾರೆ.
ಆಗ ಕಾಂಗ್ರೆಸ್ ಕಾರ್ಯಕರ್ತರು ಬಾಬುರಾವ್ ಚಿಂಚನಸೂರ್ ಪರ ಘೋಷಣೆ ಕೂಗಿದ್ದಾರೆ. ಹೀಗಾಗಿ ವೇದಿಕೆ ಎದುರು ಎರಡೂ ಪಕ್ಷಗಳ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದೆ. ಆನಂತರ ಶಾಸಕರ ಶರಣಗೌಡ ಕಂದಕೂರ ಕೈ ಮುಗಿದು ಬೆಂಬಲಿಗರನ್ನು ಸಮಾಧಾನ ಪಡಿಸಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ.