ಎಲ್ಲೆಂದರಲ್ಲಿ ಕಸ ಹರಡುವುದು ಸ್ವಚ್ಛತೆ ಅಲ್ಲ. ನಿತ್ಯದ ಕಾಯಕವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸ್ವಚ್ಛ ಭಾರತ ಅಭಿಯಾನ 10 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ನಿತ್ಯ ನಮ್ಮ ಪರಿಸರವನ್ನು ಒಂದಲ್ಲಾ ಒಂದು ರೀತಿಯಿಂದ ಹಾಳು ಮಾಡುತ್ತೇವೆ. ನಿತ್ಯ ಸ್ವಚ್ಛವಾಗಿಟ್ಟುಕೊಳ್ಳುವ ಕುರಿತು ಪಣ ತೊಡಬೇಕಿದ ಎಂದಿದ್ದಾರೆ.
ಭಾರತ ಸರ್ಕಾರವು ದೇಶದ ಮೂಲೆ ಮೂಲೆಗೆ ಹೋಗಿ ಸ್ವಚ್ಛತೆಯ ಪಾಠ ಮಾಡಿ ಅಥವಾ ಸ್ಪರ್ಧೆ ನಡೆಸಲು ಸಾಧ್ಯವಿಲ್ಲ. ಸ್ಥಳೀಯರು ಆಸ್ಪತ್ರೆಗಳು, ಶಾಲೆಗಳು, ಕಚೇರಿಗಳು, ಬಾವಿ, ನದಿಗಳನ್ನು ಶುಚಿಗೊಳಿಸುವುದು ಸೇರಿದಂತೆ ಸ್ವಚ್ಛತೆಗೆ ಸಂಬಂಧಿಸಿದಂತೆ ಸ್ಪರ್ಧೆ ಏರ್ಪಡಿಸಬೇಕು ಎಂದಿದ್ದಾರೆ.
ಸ್ವಚ್ಛತೆಗೆ ಸಂಬಂಧಿಸಿದಂತೆ ನಿತ್ಯ ಸವಾಲುಗಳು ಹೆಚ್ಚಾಗುತ್ತಿವೆ. ಯೂಸ್ ಆ್ಯಂಡ್ ಥ್ರೋ ಉತ್ಪನ್ನಗಳು ಕೂಡ ಹೆಚ್ಚಾಗಿವೆ. ಎಲೆಕ್ಟ್ರಾನಿಕ್ ವೇಸ್ಟ್ ಕೂಡ ಹೆಚ್ಚಾಗಲಿದ್ದು, ಅದರ ನಿರ್ವಹಣೆಗೆ ಯೋಜನೆ ರೂಪಿಸಲೇಬೇಕಿದೆ. ನೀರಿನ ವಿಚಾರಕ್ಕೆ ಬಂದರೆ ನಮಾಮಿ ಗಂಗೆ ಅಭಿಯಾನದ ಮೂಲಕ ಗಂಗಾ ನದಿಯನ್ನು ಸ್ವಚ್ಛಗೊಳಿಸಲಾಗಿದೆ. ಅಮೃತ ಮಿಷನ್ ನಡಿ ಸಾಕಷ್ಟು ನದಿಗಳು ಶುಚಿಗೊಂಡಿವೆ. ನೀರಿನ ಬಳಕೆ ಕುರಿತು ಜನರಿಗೆ ಕಿವಿಮಾತು ಹೇಳಬೇಕಿದೆ.
ನಿಮ್ಮ ಮನೆ ನಿರ್ಮಾಣ ಮಾಡುವಾಗ ಬಳಕೆ ಮಾಡುವ ನೀರಿನ ಕುರಿತು ಎಚ್ಚರಿಕೆ ಇರಬೇಕು. ಹೆಚ್ಚಿನ ನೀರು ಪೋಲಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.