ಐದು ವರ್ಷ ನಾನೇ ಎಂದು ಹೇಳಿಕೆ ನೀಡಿದ ಬಳಿಕ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಜೊತೆಯಾಗಿ ಹೆಜ್ಜೆ ಇಟ್ಟು ಆಶ್ಚರ್ಯ ಮೂಡಿಸಿದ್ದಾರೆ.
ವಿಧಾನಸೌಧಲ್ಲಿ ಕೃಷ್ಣ ಭಾಗ್ಯ ಜಲ ನಿಗಮದ ನಿರ್ದೇಶಕರ ಸಭೆಗೆ ಸಿಎಂ, ಡಿಸಿಎಂ ಒಟ್ಟಾಗಿ ಆಗಮಿಸಿ ರಾಜ್ಯ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ ಎನ್ನುವುದನ್ನು ಸಾಬೀತು ಮಾಡಿದ್ದಾರೆ.
143ನೇ ನಿರ್ದೇಶಕರ ಮಂಡಳಿ ಸಭೆ ಹಾಗೂ 30ನೇ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಗೆ ಜೊತೆಗೂಡಿ ಬಂದದು, ಒಟ್ಟಾಗಿ ಸಭೆಯನ್ನು ನಡೆಸಿದ್ದಾರೆ.



















