ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರ ಮೊಮ್ಮಗ ಹಾಗೂ ಸಂಸದ ಬಿವೈ ರಾಘವೇಂದ್ರ (BY Raghavendra) ಅವರ ಪುತ್ರನ ಆರತಕ್ಷತೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿದ್ದಾರೆ.
ಪುತ್ರ ಸುಭಾಷ್ ಭಾನುವಾರ ಅರಮನೆ ಮೈದಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು, ಶನಿವಾರ ಆರತಕ್ಷತೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.
ಈ ವೇಳೆ ಜಮೀರ್ ಅಹ್ಮದ್, ಭೈರತಿ ಸುರೇಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಈ ವೇಳೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ನಾಳೆ ಮದುವೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ.