ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಭಾರೀ ಚರ್ಚೆಯಲ್ಲಿದೆ. ಸರ್ಕಾರದ ಎರಡೂವರೆ ವರ್ಷ ಅವಧಿ ಪೂರ್ಣಗೊಂಡ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ನಡೆಯುತ್ತಿದೆ. ಈ ಹಿನ್ನಲೆ ಇದೀಗ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ಕುರಿತು ಪರ ವಿರೋಧದ ಬಗ್ಗೆ ಕರ್ನಾಟಕ ನ್ಯೂಸ್ ಬೀಟ್ ಸಾರ್ವಜನಿಕ ಅಭಿಪ್ರಾಯವನ್ನು ಸಂಗ್ರಹಣೆ ಮಾಡಿದೆ.
ಸಿಎಂ ಬದಲಾವಣೆ ಆಗಬೇಕು ಎನ್ನುವ ವರ್ಗ:
ಸಿಎಂ ಸಿದ್ದರಾಮಯ್ಯನವರು ಈ ಹಿಂದೆ ಐದು ವರ್ಷ ಪೂರ್ಣಗೊಳಿಸಿದ್ದಾರೆ. ಈಗ ಎರಡುವರೆ ವರ್ಷ ಪೂರ್ಣಗೊಳಿಸುವ ಹಂತಕ್ಕೆ ಬಂದಿದ್ದಾರೆ. ಪಕ್ಷದಲ್ಲಿ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು. ಸಿದ್ದರಾಮಯ್ಯ ಸರ್ವಾಧಿಕಾರತ್ವ ಧೋರಣೆ ತೋರಿಸುತ್ತಾ ಇದ್ದಾರೆ ಹಾಗೂ ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡುವಲ್ಲಿ ವಿಫಲವಾಗಿದ್ದಾರೆ. ಬೇರೆ ಅಭಿವೃದ್ಧಿಗೆ ಹಣಕಾಸುಗಳನ್ನು ನೀಡುತ್ತಾ ಇಲ್ಲ. ಸಿದ್ದರಾಮಯ್ಯನವರ ಸರ್ಕಾರ ನಮಗೆ ಬೇಡ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಇಷ್ಟೂ ಮಾತ್ರವಲ್ಲದೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಹ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರಿಗೂ ಸಹ ಒಂದು ಅವಕಾಶವನ್ನು ಮಾಡಿಕೊಡಬೇಕು. ಡಿ.ಕೆ ಶಿವಕುಮಾರ್ ಅವರನ್ನು ಹೊರತುಪಡಿಸಿ ಬೇರೆಯವರಿಗೆ ಸಹ ಅವಕಾಶ ಮಾಡಿಕೊಡಬೇಕು. ಗ್ಯಾರಂಟಿ ಯೋಜನೆಗಳಿಂದ ದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚಳ ಆಗಿದೆ. ಮುಂದಿನ ದಿನಗಳಲ್ಲಿ ಜನರಿಗೆ ಆರ್ಥಿಕ ಹೊರೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ಪರ:

ಸಿದ್ದರಾಮಯ್ಯ ಉತ್ತಮ ಕೆಲಸ ಮಾಡುತ್ತಾ ಇದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸರಿಯಾದ ರೀತಿಯಲ್ಲಿ ರಾಜ್ಯವನ್ನು ನಡೆಸುವುದಕ್ಕೆ ಬರುವುದಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಸಿದ್ದರಾಮಯ್ಯ ಉತ್ತಮ ಸಿಎಂ. ಹಾಗೂ ಆರ್ಥಿಕ ತಜ್ಞರು. ಆಡಳಿತದ ಬಗ್ಗೆ ಸ್ಪಷ್ಟವಾಗಿ ಅವರಿಗೆ ತಿಳಿದಿದೆ ಹಾಗಾಗಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವುದು ಬೇಡವೆಂದು ಕೆಲ ವರ್ಗದ ಜನರು ಹೇಳಿದ್ದಾರೆ.
ಸರ್ಕಾರದ ಕುರಿತು ಭಾರಿ ವಿರೋಧ:

ಇನ್ನು, ಸರ್ಕಾರದ ಕುರಿತು ಜನರಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು, ಈ ಸರ್ಕಾರ ಮೊದಲು ತೊಲಗಬೇಕು. ಕುಮಾರಸ್ವಾಮಿ ಅವರು ರಾಜ್ಯದ ಸಿಎಂ ಆಗಬೇಕು ಎಂದು ಒಂದು ವರ್ಗದ ಜನರು ತಿಳಿಸಿದ್ದರೆ, ಇನ್ನೂ ಕೆಲವರ್ಗದ ಜನರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೂಲಕ ದೆಹಲಿ ಮಾದರಿಯಲ್ಲಿ ಕರ್ನಾಟಕ ಆಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್, ಸುಮ್ಮನೆ ವಿಪಕ್ಷಗಳ ಆಹಾರ ಆಗ್ತಿವಿ : ರಾಮಲಿಂಗಾ ರೆಡ್ಡಿ



















