ಬೆಂಗಳೂರು: ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಿದ ಪ್ರಶ್ನೆಗಳು ಅಸಮರ್ಪಕವಾಗಿಲ್ಲ ಎಂಬ ವಿಷಯಕ್ಕೆ ಸಂಬಧಿಸಿದಂತೆ ಮರು ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸೂಚಿಸಿರುವ ಸಿಎಂ, ಎರಡು ತಿಂಗಳಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯನ್ನು (Gazetted Probationers Preliminary Exam) ಮರು ನಡೆಸುವಂತೆ ಕರ್ನಾಟಕ ಲೋಕಸೇವಾ ಆಯೋಗ (KPSC)ಕ್ಕೆ ಸೂಚಿಸಿದ್ದಾರೆ. “ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್ಸಿಗೆ ಸೂಚನೆ ನೀಡಿದ್ದೇನೆ.” ಎಂದು ಬರೆದುಕೊಂಡಿದ್ದಾರೆ.
ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ” ಎಂದು ಸಿಎಂ ಹೇಳಿದ್ದಾರೆ.