ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಕಾರ್ಕಳದ ಆಯುಷ್ ಶೆಟ್ಟಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎ.16ರಂದು ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸನ್ಮಾನ ಮಾಡಿದ್ದಾರೆ.
ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿಗಳು, ಆಯುಷ್ ಶೆಟ್ಟಿ ಅವರ ಸಾಧನೆ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಚೀನಾದ ನಿಂಗ್ಬೊದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಆಯುಷ್ ಶೆಟ್ಟಿ ಅವರು ವಿಶ್ವದ ನಂ.1 ಆಟಗಾರ ಕುನ್ಲಾವುಟ್ ವಿಟಿರ್ಡ್ಸರ್ನ್ ಅವರನ್ನು ಸೋಲಿಸಿ ಫೈನಲ್ ಪ್ರವೇಶಿಸುವ ಮೂಲಕ ಎಲ್ಲರ ಗಮನ ತನ್ನತ್ತ ಸೆಳೆದಿದ್ದರು. ಬರೋಬ್ಬರಿ 61 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಉದಯೋನ್ಮುಖ ತಾರೆ ಆಯುಷ್ ಶೆಟ್ಟಿ ಬೆಳ್ಳಿ ಪದಕ ಗೆದ್ದು ಈ ವಿಭಾಗದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ: ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ – ಡಿಸಿ ಕಛೇರಿ ಎದುರು ಉಪವಾಸ ಸತ್ಯಾಗ್ರಹ


















