ಬೆಂಗಳೂರು: ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶವನ್ನು ಸಿಎಂ ಸಿದ್ದರಾಮಯ್ಯ ವೀಕ್ಷಿಸಿದ್ದಾರೆ.

ನಾಗವಾರದ ವೀರಣ್ಣಪಾಳ್ಯದ ಜಂಕ್ಷನ್ ಬಳಿ ಇಂದು ಅಧಿಕಾರಿಗಳು ಹಾಗೂ ಡಿಸಿಎಂ ಜೊತೆ ತೆರಳಿ ವೀಕ್ಷಣೆ ಮಾಡಿದ್ದಾರೆ.
ಈ ವೇಳೆ ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಈ ವೇಳೆ ಅಧಿಕಾರಿಗಳು ರಾಜಕಾಲುವೆ ಒತ್ತುವಾರಿ ಆಗಿರುವುದನ್ನು ಒಪ್ಪಿಕೊಂಡಿದ್ದು, ಸಿಎಂ ಹಾಗೂ ಡಿಸಿಎಂ ಕೆಂಡಕಾರಿದ್ದಾರೆ.

ರಾಜಕಾಲುವೆ ಒತ್ತುವರೆ ಮಾಡಿರುವುದನ್ನು ಹೊಡೆದು ಹಾಕಿ ಎಂದಿದ್ದಾರೆ. ನಂತರ ಹೆಚ್ ಬಿ ಆರ್ ಲೇಔಟ್ ನಲ್ಲಿ ವೀಕ್ಷಣೆ ಮಾಡಿದ್ದಾರೆ. HBR ಲೇಔಟ್ ನಲ್ಲಿ ತುಂಬಿ ಹರಿಯುತ್ತಿರುವ ರಾಜಕಾಲುವೆ ವೀಕ್ಷಿಸಿದ್ದಾರೆ.

ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು. ಮಳೆಯಿಂದಾಗಿ ತೊಂದರೆಯಾಗಿರುವ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.

ಎಚ್ ಬಿಆರ್ ಲೇಔಟ್ ನ ರಾಜಕಾಲುವೆ ಪಕ್ಕ ಇರುವ ಬೇಸ್ ಮೆಂಟ್ ಪಾರ್ಕಿಂಗ್ ವ್ಯವಸ್ಥೆ ನಿಷೇಧಿಸಲು ಸೂಚಿಸಿದ್ದಾರೆ. ನೂರು ಮೀಟರ್ ವರೆಗೂ ಬೇಸ್ ಪಾರ್ಕಿಂಗ್ ಗೆ ಅವಕಾಶ ಕೊಡಬೇಡಿ. ಇದನ್ನು ಟೌನ್ ಪ್ಲಾನಿಂಗ್ ವೇಳೆ ಪರಿಗಣಿಸಬೇಕು. ಮುಂದೆ ಇಲ್ಲಿ ಬೇಸ್ ಮೆಂಟ್ ಪಾರ್ಕಿಂಗ್ ಗೆ ಅವಕಾಶ ಕೊಡಬೇಡಿ ಎಂದು ಸಿಎಂ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.