ಮೈಸೂರು ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಈಡಲು ಪಾಲಿಕೆ ಮುಂದಾಗಿದ್ದಕ್ಕೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ಈಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಅವರು, ಮೈಸೂರು ಸಂಸ್ಥಾನ ಕಟ್ಟಿ ಬೆಳೆಸಿದವರು ಮೈಸೂರಿನ ರಾಜ ಮಹಾರಾಜರು. ಅಂತಹ ಶ್ರೇಷ್ಠ ರಾಜ ಮನೆತನದವರ ಹೆಸರಿರುವ ರಸ್ತೆಗೆ ಮುಖ್ಯಮಂತ್ರಿ ನವರು ತಮ್ಮದೇ ಹೆಸರಿಟ್ಟುಕೊಳ್ಳಲು ಹೊರಟಿದ್ದಾರೆ.
ನಪ್ರತಿನಿಧಿಗಳೇ ಇಲ್ಲದ ಮೈಸೂರು ಮಹಾನಗರ ಪಾಲಿಕೆ ಈ ನಿರ್ಧಾರ ತೆಗೆದುಕೊಂಡಿರುವುದು ಎಷ್ಟು ಕ್ರಮಬದ್ಧ ಹಾಗೂ ಎಷ್ಟು ಸಮಂಜಸ.? ತಾವೇ ಅಧಿಕಾರದಲ್ಲಿದ್ದು ತಮ್ಮ ಹೆಸರನ್ನೇ ಪ್ರತಿಷ್ಠಾಪಿಸಿಕೊಳ್ಳಲು ಹೊರಟಿರುವ ಮುಖ್ಯಮಂತ್ರಿಗಳಿಗೆ ನೈತಿಕತೆ ಚುಚ್ಚುವುದಿಲ್ಲವೇ..? ಎಂದು ಪ್ರಶ್ನೆ ಮಾಡಿದ್ದಾರೆ. ತುಘಲಕ್ ಆಡಳಿತ ಅನುಸರಿಸುವವರಲ್ಲಿ ಮಾತ್ರ ಇಂತಹ ನಡೆಯನ್ನು ಕಾಣಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.