ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ (Government School) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದ ಆರೂ ದಿನವೂ ಮೊಟ್ಟೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಸೂಚನೆ ನೀಡಲಾಗಿದೆ. ಮಕ್ಕಳಿಗೆ ಸಮವಸ್ತ್ರ, ಪುಸ್ತಕ ಎಲ್ಲವನ್ನೂ ಕೊಡುತ್ತಿದ್ದೇವೆ. 1 ರಿಂದ 1.50 ಲಕ್ಷ ವಿದ್ಯಾರ್ಥಿಗಳು ಸಂಖ್ಯೆ ಕಡಿಮೆ ಆಗುತ್ತಿದೆ. ಮಂಗಳೂರು, ಉಡುಪಿ, ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಆದರೆ, ಕೆಲವು ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದ್ದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಡಿಮೆ ಫಲಿತಾಂಶ ಬಂದಿದೆ. ಹೀಗಾಗಿ, 5 ಸಾವಿರ ಕೋಟಿ ರೂಪಾಯಿ ಕೊಡುತ್ತಿದ್ದೇನೆ ಎಂದು ಹೇಳಿದರು.
ಶಾಲೆ, ಆಸ್ಪತ್ರೆ, ಅಂಗನವಾಡಿ, ವಸತಿಶಾಲೆ, ರುದ್ರ ಭೂಮಿಗೆ ಸರ್ಕಾರಿ ಜಮೀನು, ನಿವೇಶ ಕೊಡಬೇಕು. ಸರ್ಕಾರಿ ಜಮೀನು ಇಲ್ಲದಿದ್ದರೇ, ಖರೀದಿ ಮಾಡಿ ವಿತರಿಸಬೇಕು. ಎಸ್ಸಿ, ಎಸ್ಟಿಗಳಿಗೆ ಸಿಂಧುತ್ವ ಪ್ರಮಾಣ ಪತ್ರವನ್ನು ಒಂದು ತಿಂಗಳ ಒಳಗೆ ನೀಡುವಂತೆ ಸೂಚಿಸಲಾಗಿದೆ ಎದಿದ್ದಾರೆ. ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದಿದ್ದಾರೆ.
ಶಾಲಾ, ಕಾಲೇಜುಗಳಲ್ಲಿ ಮಾದಕ ದ್ರವ್ಯ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.