ಬೆಂಗಳೂರು: ಜಾತಿಗಣತಿ ವರದಿ ವಿಚಾರದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಒಮ್ಮತ ಮೂಡದ ಕಾರಣ, ಮೇ 2 ರಂದು ಕರೆಯಲಾಗಿರುವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುವುದಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಹೊರ ಬಿದ್ದಿದೆ.
ಸಿಎಂ ಸಿದ್ಧರಾಮಯ್ಯರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಅಂಶಗಳು ಹೊರಬಿದ್ದ ಕಾರಣ, ಜಾತಿಗಣತಿ ಬಗ್ಗೆ ಮೇ 2 ಸಂಪುಟ ಸಭೆಯಲ್ಲಿ ಚರ್ಚೆ ಮಾಡೋಣ ಎಂಬ ನಿರ್ಧಾರಕ್ಕೆ ಬರಲಾಗಿದ್ದು, ಮುಂದಿನ 15 ದಿನಗಳ ಕಾಲ ರಾಜ್ಯದಲ್ಲಿ ಮತ್ತೆ ಜಾತಿಗಣತಿ ವಿಚಾರವೇ ಬಿಸಿ ಬಿಸಿ ಚರ್ಚೆಯಾಗಲಿದ್ದು, ವಿಚಾರ ಜೀವಂತವಾಗಿದೆ.