ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಚಿವರು, ಕಾಂಗ್ರೆಸ್ ನಾಯಕರು ಆರ್ ಸಿಬಿ ಹಾಗೂ ಸಿಎಸ್ ಕೆ ಮಧ್ಯೆ ನಡೆದ ಪಂದ್ಯವನ್ನು ವೀಕ್ಷಿಸಿದ್ದಾರೆ.
ಎರಡು ತಂಡಗಳ ನಡುವಿನ ಪಂದ್ಯ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. ಈ ವೇಳೆ ಸಿಎಂ ತಮ್ಮ ಒತ್ತಡದ ರಾಜಕೀಯ ಜೀವನದ ಮಧ್ಯೆಯೂ ಪಂದ್ಯ ವೀಕ್ಷಿಸಿದರು.

ಸಿಎಂ ಸಿದ್ದರಾಮಯ್ಯಗೆ ಸಚಿವ ಭೈರತಿ ಸುರೇಶ್, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ, ಶಾಸಕ ಅಶೋಕ್ ಪಟ್ಟಣ್, ಎಂಎಲ್ಸಿ ಗೋವಿಂದ ರಾಜ್ ಸೇರಿದಂತೆ ಹಲವರು ಸಾಥ್ ನೀಡಿದರು.