ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಅಮಿತ್ ಶಾಗೆ ಬಹಿರಂಗ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

December 19, 2024
Share on WhatsappShare on FacebookShare on Twitter

ಬೆಳಗಾವಿ: ಲೋಕಸಭೆಯಲ್ಲಿ ಸಂವಿಧಾನದ 75ನೇ ವರ್ಷಾಚರಣೆಯ ಪ್ರಯತ್ನ ನಡೆಯುತ್ತಿದ್ದ ಚರ್ಚೆಯಲ್ಲಿ ಡಾ. ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಶಾ ಕೀಳಾಗಿ ಮಾತನಾಡಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ.

ಬಹಿರಂಗ ಪತ್ರ ಬರೆದಿರುವ ಸಿಎಂ, ಸನ್ಮಾನ್ಯ ಅಮಿತ್ ಶಾ ಅವರೇ, ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು ಗೊತ್ತಿತ್ತು. ಸಂಸತ್ ನಲ್ಲಿ (18-12-2024) ಆಡಿದ ನಿಮ್ಮ ಮಾತಿನಿಂದ ಇಡೀ ದೇಶಕ್ಕೆ ನಿಮ್ಮ ಅಂತರಂಗದ ಅರಿವಾಗಿದೆ. ಬಾಬಾಸಾಹೇಬ್ ಅವರು ಕೊಟ್ಟ ಸಂವಿಧಾನದಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಸಂಸತ್ ನಲ್ಲಿ ನಿಂತು ಅವರ ಸ್ಮರಣೆಯನ್ನು ವ್ಯಸನ ಎಂದು ತುಚ್ಛೀಕರಿಸುವ ನಿಮ್ಮ ಧಾಷ್ಟ್ರಕ್ಕೆ ಶಹಭಾಸ್ ಅನ್ನಲೇಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಅಮಿತ್ ಶಾ ಅವರೇ, ‘’ಬಾಬಾಸಾಹೇಬರ ಬಗ್ಗೆ ತಮಗೆ ಅಪಾರ ಅಭಿಮಾನ ಇದೆ, ಗೌರವ ಇದೆ, ನನ್ನ ಮಾತುಗಳನ್ನು ತಿರುಚಲಾಗಿದೆ’’ ಎಂದೆಲ್ಲ ಸ್ಪಷ್ಟೀಕರಣ ಕೊಟ್ಟು ಆತ್ಮವಂಚನೆ ಮಾಡಿಕೊಳ್ಳಬೇಡಿ. ಅದನ್ನು ಸಮರ್ಥಿಸಿಕೊಂಡು ದೇಶವನ್ನು ಎದುರಿಸಿ. ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ. ನಮ್ಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸ್ಮರಣೆ ಇರಲಿದೆ. ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ್ಮ ದುರಹಂಕಾರದ ಮಾತಿಗೆ ನಿಮ್ಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು. ಆದರೆ ಅಂಬೇಡ್ಕರ್ ಅವರಿಂದಾಗಿ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಂತರ ಜನ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎನ್ನುವುದು ತಿಳಿದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ, ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು.. ನಮ್ಮ ಪಕ್ಷದ ಹಿರಿಯ ನಾಯಕರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಎಐಸಿಸಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರಲಿಲ್ಲ, ಕಲಬುರ್ಗಿಯ ಯಾವುದಾದರೂ ಕಾರ್ಖಾನೆಯಲ್ಲಿ ಕಾರ್ಮಿಕರಾಗಿರುತ್ತಿದ್ದರು. ಈ ವಾಸ್ತವ ಸದಾ ನಮ್ಮ ನೆನಪಲ್ಲಿರುತ್ತದೆ. ನೀವು ಹೇಳುವ ವ್ಯಸನ ನಮ್ಮ ಪಾಲಿನ ಅಂಬೇಡ್ಕರ್ ಸ್ಮರಣೆ, ನಮ್ಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ. ನಾನು ಮಾತ್ರ ಅಲ್ಲ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇರುತ್ತಿದ್ದರೆ ನೀವು ಕೂಡಾ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತ್ಮನನ್ನೇ ತುಚ್ಛೀಕರಿಸುವ ಅವಕಾಶ ನಿಮಗೆ ಸಿಗುತ್ತಿರಲಿಲ್ಲ.

ನೀವು ನಿಮ್ಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು, ದೇಶದ ಪ್ರಧಾನಿ ಮತ್ತು ನಿಮ್ಮ ಸಹದ್ಯೋಗಿ ನರೇಂದ್ರ ಮೋದಿ ಅವರು ಕೂಡಾ ರೈಲ್ವೇ ಸ್ಟೇಷನ್ ನಲ್ಲಿ ಚಹಾ ಮಾರಿಕೊಂಡೇ ಇರಬೇಕಾಗಿತ್ತೋ ಏನೋ? ಅವರಿಗೂ ಪ್ರಧಾನಿಯಾಗುವ ಅವಕಾಶವೇ ಸಿಗುತ್ತಿರಲಿಲ್ಲ. ಇದನ್ನು ಪ್ರಧಾನಿಯವರೂ ಒಪ್ಪಿಕೊಳ‍್ಳಬಹುದು ಎಂದು ನಂಬಿದ್ದೇನೆ, ನೀವೂ ಒಪ್ಪಿಕೊಂಡು ಬಿಡಿ ಎದು ತಾಕೀತು ಮಾಡಿದ್ದಾರೆ.

ಅಮಿತ ಶಾ ಅವರೇ, ಇತಿಹಾಸವನ್ನು ಓದಿರುವ ನಮ್ಮಂತಹವರಿಗೆ ನಿಮ್ಮೊಳಗಿನ ಅಂಬೇಡ್ಕರ್ ದ್ವೇಷ ಹೊಸದಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ದೇಶದ ಸಂವಿಧಾನವನ್ನು ಅವರು ಬದುಕಿರುವಾಗಲೇ ನಿಮ್ಮ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಯಾಕೆ ತಿರಸ್ಕರಿಸಿತ್ತು? ಆರ್ ಎಸ್ ಎಸ್ ನಾಯಕರಾಗಿದ್ದ ಹೆಡಗೆವಾರ್, ಗೋಲ್ವಾಲ್ಕರ್ ಮತ್ತು ಸಾವರ್ಕರ್ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆಗಳೇನು ಎನ್ನುವ ವಿವರಗಳೆಲ್ಲ ಇತಿಹಾಸದ ಪುಟಗಳಲ್ಲಿ ಇವೆ.

ನಿಮ್ಮ ಸುಳ್ಳುಗಳು ಮತ್ತು ಆತ್ಮವಂಚನೆಯ ನಡವಳಿಕೆಗಳಿಂದ ಅದನ್ನು ಮರೆಮಾಚಬಹುದು, ಆದರೆ ಅಳಿಸಿಹಾಕಲಾಗುವುದಿಲ್ಲ ಎನ್ನುವುದು ನೆನಪಿರಲಿ. ಆ ಅಭಿಪ್ರಾಯವನ್ನೇ ನೀವು ಸಂಸತ್ ನಲ್ಲಿ ಆಡಿದ್ದೀರಿ. ನಿಮ್ಮ ಮಾತಿನ ಧಾಟಿಯಲ್ಲಿಯೇ ಪ್ರತಿಕ್ರಿಯಿಸುತ್ತೇನೆ. ನಿಮ್ಮ ಪಕ್ಷ ಮತ್ತು ಅದರ ಹಿಂದಿರುವ ಪರಿವಾರಕ್ಕೆ ಇತ್ತೀಚೆಗೆ ಮೋದಿ…ಮೋದಿ.. ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ. ಮೋದಿಯವರ ಬದಲಿಗೆ ಅಷ್ಟು ಬಾರಿ ದೇವರ ನಾಮ ಸ್ಮರಣೆ ಮಾಡಿದ್ದರೆ ಏಳು ಜನ್ಮದಲ್ಲಿ ಮಾತ್ರ ಅಲ್ಲ, ನೂರು ಜನ್ಮದಲ್ಲಿಯೂ ನಿಮಗೆ ಸ್ವರ್ಗವೇ ಸಿಗುತ್ತಿತ್ತು, ಕೇವಲ ಅಧಿಕಾರದಲ್ಲಿ ಉಳಿಯಲಿಕ್ಕಾಗಿ ಮಾಡಿರುವ ಪಾಪಕೃತ್ಯಗಳಿಗೆ ಕ್ಷಮೆಯೂ ಸಿಗುತ್ತಿತ್ತು. ವಿಶ್ವಾಸಪೂರ್ವಕವಾಗಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Tags: Amit shahCongessconstitutionLok Sabha
SendShareTweet
Previous Post

ನಾನು ರಾಜ್ಯದ ಮಂತ್ರಿಗಿಂತ ಪವರ್ ಫುಲ್

Next Post

ರವಿಚಂದ್ರನ್ ನಿವೃತ್ತಿ ಘೋಷಣೆ; ಕೊಹ್ಲಿ

Related Posts

ಚಿಕ್ಕೋಡಿಯ ಗೋಟುರ ರಸ್ತೆಯಲ್ಲಿ ಮತ್ತೊಂದು ಬಲಿ…!
ಬೆಳಗಾವಿ

ಚಿಕ್ಕೋಡಿಯ ಗೋಟುರ ರಸ್ತೆಯಲ್ಲಿ ಮತ್ತೊಂದು ಬಲಿ…!

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಸಿಮೆಂಟ್ ತುಂಬಿದ ಲಾರಿ ಪಲ್ಟಿ | ತಪ್ಪಿದ ಭಾರೀ ಅನಾಹುತ
ಬೆಳಗಾವಿ

ಸಿಮೆಂಟ್ ತುಂಬಿದ ಲಾರಿ ಪಲ್ಟಿ | ತಪ್ಪಿದ ಭಾರೀ ಅನಾಹುತ

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ!
ಬೆಳಗಾವಿ

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ!

ಜೈಲಿಂದ ರಿಲೀಸ್‌ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಚಂದ್ರು ಲಮಾಣಿ!
ರಾಜಕೀಯ

ಜೈಲಿಂದ ರಿಲೀಸ್‌ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಚಂದ್ರು ಲಮಾಣಿ!

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!
ರಾಜ್ಯ

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

Next Post
ರವಿಚಂದ್ರನ್ ನಿವೃತ್ತಿ ಘೋಷಣೆ; ಕೊಹ್ಲಿ

ರವಿಚಂದ್ರನ್ ನಿವೃತ್ತಿ ಘೋಷಣೆ; ಕೊಹ್ಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

Recent News

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat