ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಅವರು ಮಲೆ ಮಹದೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದೇಗುಲಕ್ಕೆ ಆಗಮಿಸಿದ ಸಿಎಂಗೆ ಮಂಗಳ ವಾದ್ಯಗಳೊಂದಿಗೆ ಸ್ವಾಗತಿಸಲಾಯಿತು. ಪ್ರಾಧಿಕಾದಿಂದ ಸಿಎಂಗೆ ಪೂರ್ಣಕುಂಭ ಸ್ವಾಗತ ನಡೆಸಲಾಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾದಪ್ಪನ ದೇವಾಲಯ ಪ್ರದಕ್ಷಿಣೆ ಹಾಕಿದ್ದಾರೆ. ಈ ವೇಳೆ ಸಚಿವರಾದ ಕೆ. ವೆಂಕಟೇಶ್, ಎಚ್.ಸಿ. ಮಹದೇವಪ್ಪ ಸೇರಿದಂತೆ ಹಲವರು ಸಾಥ್ ನೀಡಿದ್ದರು.
ಆಂತರ ಬೆಳ್ಳಿ ರಥಾರೂಢ ಮಹದೇಶ್ವರನ ದರ್ಶನ ಪಡೆದರು. ಈ ವೇಳೆ ಹೆಗಲ ಮೇಲೆ ದಂಡಗೋಲು ಹೊತ್ತು ಮಾದಪ್ಪನಿಗೆ ಭಕ್ತಿ ಸಮರ್ಪಿಸಿದದರು.