ಉತ್ತರ ಕನ್ನಡ : ತಣ್ಣಗಾಗಿದ್ದ ಭಟ್ಕಳದಲ್ಲಿ ಮತ್ತೆ ಕೋಮು ಸಂಫರ್ಷ ಉಂಟಾಗಿದೆ. ಭಟ್ಕಳದ ನಗರ ಪೊಲೀಸ್ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಹಿಂದೂ ಮುಖಂಡ ಶ್ರೀಕಾಂತ ನಾಯ್ಕ್ ಹಾಗೂ ಕುಮಾರ್ ನಾಯ್ಕ್ ಮೇಲೆ ಪ್ರಕರಣ ದಾಖಲಾಗಿದ್ದಕ್ಕೆ ಹಿಂದೂ ಮುಖಂಡರು ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.

ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದರಿಂದ ಅನುಮಾನಗೊಂಡ ಹಿಂದೂ ಸಂಘಟನೆ ಮುಖಂಡರು, ಕಾರು ಅಡ್ಡಗಟ್ಟಿ ಪ್ರಶ್ನಿಸಿದ್ದಾರೆ. ಈ ವೇಳೆ ಪ್ರಶ್ನೆಗೆ ಸರಿಯಾದ ಉತ್ತರ ನೀಡದ ಹಿನ್ನೆಲೆ ಬುದ್ದಿ ಹೇಳುವಂತೆ ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆದ್ರೆ, ಮುಸ್ಲಿಂ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದ ಹಿಂದೂ ಮುಖಂಡರ ವಿರುದ್ದವೇ ಪ್ರಕರಣ ದಾಖಲಿಸಲಾಗಿದೆ. ಹಿಂದೂ ಮುಖಂಡ ಶ್ರೀಕಾಂತ ನಾಯ್ಕ್ ಹಾಗೂ ಕುಮಾರ್ ನಾಯ್ಕ್ ಮೇಲೆ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆ ಹಿಂದೂ ಮುಖಂಡರು ರೊಚ್ಚಿಗೆದ್ದು, ಭಟ್ಕಳದ ನಗರ ಪೊಲೀಸ್ ಠಾಣೆ ಮುಂದೆ ನೂರಾರು ಹಿಂದೂ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಇದನ್ನೂ ಓದಿ : ವಚನಾನಂದ ಶ್ರೀಗಳ ಭವಿಷ್ಯ ಇಂದು ನಿರ್ಧಾರ – ಜಾಮೀನು ರದ್ದಾದ್ರೆ ಜೈಲು ಭೀತಿ!


















