ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಕೀಲರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ RCB ಮ್ಯಾನೇಜ್ಮೆಂಟ್ ಹಾಗೂ KSCA ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಿರ್ಲಕ್ಷ್ಯದಿಂದಲೇ ಈ ಘಟನೆ ಸಂಭವಿಸಿದ್ದು, ಹನ್ನೊಂದು ಜನ ಸಾವನ್ನಪ್ಪಿದ್ದಾರೆ.
ನಿರ್ಲಕ್ಷ್ಯ ತೋರುವ ಮೂಲಕ KSCA ಮತ್ತು RCB ಮ್ಯಾನೇಜ್ಮೆಂಟ್ 11 ಜನರ ಸಾವುಗಳಿಗೆ ಕಾರಣವಾಗಿದ್ದಾರೆ. ಹೀಗಾಗಿ BNS 106 ಅಡಿ ಮ್ಯಾನೇಜ್ಮೆಂಟ್ ಹಾಗೂ ಕೆಎಸ್ ಸಿಎ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ಕುರಿತು ವಕೀಲ ರಾಜವರ್ಧನ್ ರೆಡ್ಡಿ ಎಂಬುವವರು ದೂರು ನೀಡಿದ್ದಾರೆ.