ಶಿವಮೊಗ್ಗ : ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆ ಅದರ ಅರ್ಥನು ಗೊತ್ತಿಲ್ಲ ಹಾಗೆಯೇ ಅದಕ್ಕೆ ಇಲ್ಲವೇ ಇಲ್ಲ. ಉಪಚುನಾವಣೆ ಬಂದಾಗ ಮುಖ್ಯಮಂತ್ರಿಗಳು ಬಾಗಲಕೋಟೆಯಲ್ಲಿ ಬೀಡು ಬಿಟ್ಟಿದ್ದನ್ನ ನೀವು ನೋಡಿದ್ದೀರಿ. ಆಡಳಿತ ಯಂತ್ರ ಈಗ ಸಂಪೂರ್ಣವಾಗಿ ಕುಸಿದು ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, 30 ಶಾಸಕರು ದೆಹಲಿಗೆ ಹೋಗಿ ಕುಳಿತು ಲಾಭಿ ಮಾಡುತಿದ್ದಾರೆ. ಮುಖ್ಯಮಂತ್ರಿಯ ಕುರ್ಚಿಗಾಗಿ ನಡೆಯುತ್ತಿರುವ ಬಡದಾಟದಿಂದ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ. ಬೆಂಗಳೂರು ಸಂಪೂರ್ಣವಾಗಿ ಬಣಗುಡುತ್ತಿದೆ. ಮುಖ್ಯಮಂತ್ರಿಗಳು ಇಲ್ಲ ಉಪಮುಖ್ಯಮಂತ್ರಿಗಳು ಇಲ್ಲ ಅವರ ಕುರ್ಚಿ ಬಡದಾಟದ ಹೆಚ್ಚಾಗಿದೆ. ಅವರಿಬ್ಬರ ಬಡಿದಾಟದಲ್ಲಿ ಜನ ಅನುಭವಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮುಂಬರುವ ದಿನಗಳಲ್ಲಿ ಮೈತ್ರಿ ಸರ್ಕಾರ ಬರುತ್ತದೆ ಎಂಬ ವಿಚಾರದ ಬಗ್ಗೆ ಮಾತನಾಡುತ್ತಾ, ನಮ್ಮದು ರಾಷ್ಟ್ರೀಯ ಪಕ್ಷ ನಮ್ಮ ರಾಷ್ಟ್ರೀಯ ನಾಯಕರು ಏನು ಹೇಳುತ್ತಾರೆ ಅದರಂತೆ ಒಂದಾಗಿ ರಾಜ್ಯದ ಹಿತ ದೃಷ್ಟಿಯಿಂದ ಕೆಲಸ ಮಾಡುತ್ತೇವೆ. ಯಾವ ರೀತಿ ನಿರ್ದೇಶನ ನೀಡುತ್ತಾರೆ ಅದನ್ನು ನಾವು ಫಾಲೋ ಮಾಡುತ್ತೇವೆ ಎಂದಿದ್ದಾರೆ.
ಮಹಿಳಾ ಮೀಸಲಾತಿ ವಿಚಾರದ ಬಗ್ಗೆ ಮಾತನಾಡುತ್ತಾ, ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಿಚ್ಚ ಶಕ್ತಿ ಹಾಗೂ ಅವರ ಸಂಕಲ್ಪದಿಂದ ಮೀಸಲಾತಿ ತರಲು ಮುಂದಾಗಿದ್ದಾರೆ. ಸಾಮಾಜಿಕ ನ್ಯಾಯದ ಜೊತೆಗೆ ರಾಜಕೀಯ ಶಕ್ತಿಯನ್ನು ನೀಡಬೇಕು. ಎಲ್ಲಾ ಕಡೆಯಿಂದಲೂ 33% ಅವರಿಗೆ ಸ್ಥಾನಗಳನ್ನು ನೀಡಬೇಕು ಎಂಬ ಸದುದ್ದೇಶ ಇಟ್ಟುಕೊಂಡು ಲೋಕಸಭಾ ಅಧಿವೇಶನದಲ್ಲಿ ಮಂಡನೆ ಮಾಡಲಿದ್ದಾರೆ. ಆ ದಿಟ್ಟ ನಿರ್ಧಾರ ಈಗಾಗಲೇ ತೆಗೆದುಕೊಂಡಿದ್ದಾರೆ. ಅದನ್ನ ಅನುಷ್ಠಾನಗೊಳಿಸುವ ದಿಟ್ಟ ನಿರ್ಧಾರದೊಂದಿಗೆ ದಾಪುಗಾಲು ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.
ದೇಶ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿ ಬರಬೇಕಾದರೆ ಭಾರತ 2047ರಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕಾದರೆ ಮಹಿಳೆಯರ ಪಾತ್ರ ಮುಖ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳು ನಂಬಿದ್ದಾರೆ. ಹಾಗಾಗಿ ಅವರಿಗೆ ರಾಜಕೀಯ ಶಕ್ತಿಯನ್ನು ಕೊಡಬೇಕು ಎಂಬುದಾಗಿ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ನವರು ಮಲ್ಲಿಕಾರ್ಜುನ ಖರ್ಗೆ ಆದಿಯಾಗಿ ಇದೊಂದು ರಾಜಕೀಯ ಗಿಮಿಕ್ ಎಂದು ಹೇಳುತ್ತಿದ್ದಾರೆ. ಈ ರೀತಿ ಹೇಳಿಕೆ ಕೊಡುವುದರ ಮುಖಾಂತರ ದೇಶದ ತಾಯಂದಿರಿಗೆ ಅಪಚಾರ ಎಸಗಿದ್ದಾರೆ ಎಂದಿದ್ದಾರೆ.
ಸ್ವತಂತ್ರ ಬಂದು ಐವತ್ತು ವರ್ಷಗಳ ಕಾಲ ಅಧಿಕಾರ ನಡೆಸಿದ ನೀವು ದೇಶದ ನಾರಿ ಶಕ್ತಿಗಾಗಿ ಯೋಚನೆ ಮಾಡಿದ್ದೀರಾ. ಮಾಡುವ ಚಿಂತನೆ ಕೂಡ ನೀವು ಮಾಡಿಲ್ಲ ಹಾಗೂ ನಿಮಗೆ ಯೋಗ್ಯತೆ ನಿಮಗೆ ಕೂಡ ಇಲ್ಲ ಆ ನಿರ್ಧಾರವನ್ನು ನರೇಂದ್ರ ಮೋದಿ ಅವರು ಮಾಡಿ ದಿಟ್ಟ ನಿರ್ಧಾರವನ್ನ ತೆಗೆದುಕೊಂಡಿದ್ದಾರೆ ಅದರಲ್ಲಿ ಈಗ ಕಾಂಗ್ರೆಸ್ನವರು ಮೊಸರಲ್ಲಿ ಕಲ್ಲು ಹುಡುಕಿದ ಹಾಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ : ಡಾ. BR ಅಂಬೇಡ್ಕರ್ ಜಯಂತಿ ಹಿನ್ನೆಲೆ ದಲಿತರ ಮನೆಯಲ್ಲಿ ಶಾಸಕ ಎ. ಮಂಜು ವಾಸ್ತವ್ಯ



















