ಮಹಾರಾಷ್ಟ್ರ ಚುನಾವಣೆಯ ಕಾವು ರಂಗೇರಿದೆ. ಈ ಮಧ್ಯೆ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿದ್ದು, ಬಂಡಾಯ ಎದ್ದವರನ್ನು ಅಮಾನತು ಮಾಡಿದೆ.
ಮಹಾರಾಷ್ಟ್ರ ಕಾಂಗ್ರೆಸ್ 28 ಬಂಡಾಯ ಅಭ್ಯರ್ಥಿಗಳನ್ನು ಆರು ವರ್ಷಗಳ ಕಾಲ ಅಮಾನತು ಮಾಡಿದೆ. ಮಹಾರಾಷ್ಟ್ರದಲ್ಲಿ ನ. 20ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ ಸೇರಿದಂತೆ ಸ್ಥಳೀಯ ಪಕ್ಷಗಳ ಮಧ್ಯೆ ಭಾರೀ ಪೈಪೋಟಿ ಇದೆ. ಕಾಂಗ್ರೆಸ್ ಮಹಾ ವಿಕಾಸ್ ಅಘಾಡಿಯ ಮೈತ್ರಿಯ ಮೂಲಕ ಸ್ಪರ್ಧಿಸುತ್ತಿದೆ. ಆದರೆ, ಅಧಿಕೃತ ಅಭ್ಯರ್ಥಿಗಳ ವಿರುದ್ಧ 22 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಬಂಡಾಯವಾಗಿ ಸ್ಪರ್ಧಿಸಿದ್ದಾರೆ. ಹೀಗಾಗಿ ಅವರನ್ನೆಲ್ಲ ಕಾಂಗ್ರೆಸ್ ಅಮಾನತು ಮಾಡಿದೆ.
ಎಐಸಿಸಿ ಉಸ್ತುವಾರಿ ರಮೇಶ್ ಚೆನ್ನಿತ್ತಲ ಅವರ ಸೂಚನೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ.