ನವದೆಹಲಿ : ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು. ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. ಇದೇ 15ರಂದು ರಾಷ್ಟ್ರಮಟ್ಟದ ಹಿಂದುಳಿದ ವರ್ಗಗಳ ಸಮಿತಿ ಸಭೆಯು ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದೇ 10ರಂದು ನಾನು, ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸಭೆ ಮಾಡಲಿದ್ದು, ಪಕ್ಷದ ವಿಚಾರವಾಗಿ ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.
ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮುಖ್ಯಮಂತ್ರಿಗಳು ಈ ಸಭೆಯ ನೇತೃತ್ವ ವಹಿಸಲಿದ್ದಾರೆ. ಅವರು ಸಮಿತಿಯ ಮುಖ್ಯಸ್ಥರಲ್ಲದೇ ಇದ್ದರೂ, ದೇಶದ ಪ್ರಭಾವಿ ನಾಯಕರಾಗಿರುವ ಹಿನ್ನೆಲೆಯಲ್ಲಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಹಿಂದುಳಿದ ವರ್ಗಗಳ ಸಂಘಟನೆಯಲ್ಲಿ ಅವರ ಕೊಡುಗೆ ಪಕ್ಷಕ್ಕೆ ಅಪಾರವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಅವರ ನಾಯಕತ್ವ ಹಾಗೂ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತಿದೆ” ಎಂದು ಹೇಳಿದ್ದಾರೆ.


















