ಹುಬ್ಬಳ್ಳಿ : ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಇಂದು ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುತ್ತಿದೆ.
ನಗರದ ಗಿರಣಿ ಚಾಳ್ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು 25 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ ಇದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ದ್ವೇಷದ ತನಿಖೆ ಸೇರಿದಂತೆ ಹಲವು ವಿಷಯಗಳನ್ನಿಟ್ಟುಕೊಂಡು ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಸಂಜೆ 4 ಕ್ಕೆ ಪ್ರಾರಂಭವಾಗುವ ಬೃಹತ್ ಪ್ರತಿಭಟನೆಯಲ್ಲಿ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ಕಾರವಾರ ಜಿಲ್ಲೆಗಳ ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಪ್ರತಿಭಟನೆ ವೇಳೆ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ದರ ಏರಿಕೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಲಾಗುತ್ತದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.