ವಿಜಯಪುರ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಗೋವಿಂದ್ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬರೀ ಗಿಮಿಕ್ ಮಾಡುತ್ತಾರೆ. ಜಾತಿ ಗಣತಿ ವಿಚಾರದಲ್ಲಿ ಜನರಿಗೆ ಗಿಮಿಕ್ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ದುರುದ್ದೇಶದಿಂದ ಜಾತಿಗಣತಿ ಮಾಡುತ್ತಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ದುರುದ್ದೇಶದಿಂದ ಜಾತಿ ಗಣತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ 2013ರಿಂದ 2018ರ ವರೆಗೂ ಸಿಎಂ ಆಗಿದ್ದರು. ಆ ವೇಳೆ ಯಾಕೆ ಜಾತಿ ಗಣತಿ ಒಪ್ಪಲಿಲ್ಲ? ಎಂದು ಪ್ರಶ್ನಿಸಿದ ಅವರು, ಇದೀಗ ಎರಡು ವರ್ಷ ಆಯ್ತು. ಜಾತಿ ಗಣತಿ ಇನ್ನೂ ಒಪ್ಪಿಲ್ಲ. ಅಧಿಕಾರಕ್ಕೆ ಬಂದ ಕೂಡಲೆ ಒಳಮೀಸಲಾತಿ ಜಾರಿಗೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ, ಅದನ್ನು ಕುರ್ಚಿ ಕೆಳಗೆ ಇಟ್ಟುಕೊಂಡು ಕುಳಿತ್ತುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯರಂತೆ ಪ್ರಧಾನಿ ನರೇಂದ್ರ ಮೋದಿ ಗಿಮಿಕ್ ಮಾಡುವುದಿಲ್ಲ ಎಂದಿದ್ದಾರೆ.