ಬೆಂಗಳೂರು: ಜೆಡಿಎಸ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ನಗರದ ಕಾಂಗ್ರೆಸ್ ಭವನ ನಿಂದ ಜೆಡಿಎಸ್ ಕಚೇರಿವರೆಗೆ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುವುದರ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕೇಂದ್ರ ಸಚಿವ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಕಾಂಗ್ರೆಸ್ ನಾಯಕರ ಭ್ರಷ್ಟಾಚಾರದ ದಾಖಲೆಗಳು ಟನ್ ಗಟ್ಟಲೇ ಇವೆ ಎಂದು ಆರೋಪಿಸಿದ್ದರು. ಹೀಗಾಗಿ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡುವುದರ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಟಾಂಗ್ ಕೊಟ್ಟಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಟ್ರಕ್ ನ್ನು ಜೆಡಿಎಸ್ ಕಚೇರಿಗೆ ಕಳುಹಿಸುವುದರ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ನಿಮ್ಮ ಬಳಿ ಇರುವ ಟನ್ ಗಟ್ಟಲೆ ದಾಖಲೆಯನ್ನು ಈ ಟ್ರಕ್ ಗೆ ಹಾಕಿ. ನಾವು ಅದನ್ನು ರಾಜಭವನಕ್ಕೆ ಕಳುಹಿಸುತ್ತೇವೆ ಎಂದು ವ್ಯಂಗ್ಯವಾಡಿದ್ದಾರೆ.