ಉಡುಪಿಯಲ್ಲಿ ಏಕಾಏಕಿ ಸುಂಟರಗಾಳಿಯೊಂದಿಗೆ ಮಳೆ ಸುರಿದ ಪರಿಣಾಮ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ.
ಉಡುಪಿಯ ಕಟ್ಟೆ ಆಚಾರ್ಯ ಮಾರ್ಗದಲ್ಲಿ ಮನೆಯ ಮೇಲೆ ಆಲದ ಮರ ಬಿದ್ದಿರುವ ಘಟನೆ ನಡೆದಿದೆ. ರಾಘವೇಂದ್ರ ಮತ್ತು ಕೇಶವ ಭಟ್ ಎಂಬುವವರ ಮನೆಯ ಮೇಲೆ ಆಲದ ಮರ ಬಿದ್ದಿದೆ. ಸುಮಾರು 150- 200 ವರ್ಷಗಳ ಹಿಂದಿನ ಭಾರಿ ಗಾತ್ರದ ಆಲದ ಮರ ಉರುಳಿ ಬಿದ್ದಿದ್ದು, ಘಟನೆಯಲ್ಲಿ ಮನೆಯೊಳಗಿದ್ದ ರಾಘವೇಂದ್ರ ಭಟ್, ನೀರಜಾ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಪರೀತ ಗಾಳಿ, ಮಳೆಗೆ ಮರ ಮನೆಯ ಮೇಲೆ ಬಿದ್ದಿದೆ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಮನೆಯೊಳಗಿದ್ದ ವಸ್ತುಗಳೆಲ್ಲ ಹಾನಿಯಾಗಿವೆ. ಇದರಿಂದಾಗಿ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ.