ಮಂಡ್ಯ: ಪಶು ಆಹಾರ ತಿಂದು ಎರಡು ಹಸುಗಳು ಸಾವನ್ನಪ್ಪಿ ಮತ್ತೊಂದು ಹಸು ಅಸ್ವಸ್ಥಗೊಂಡಿರುವ ಘಟನೆ, ಕೆ.ಆರ್.ಪೇಟೆಯ ವಳಗೆರೆಮೆಣಸ ಗ್ರಾಮದಲ್ಲಿ ನಡೆದಿದೆ.
ರೈತ ರಾಮಕೃಷ್ಣೇಗೌಡ ಎಂಬುವರಿಗೆ ಸೇರಿದ ಲಕ್ಷಾಂತರ ರೂ ಮೌಲ್ಯದ ಹಸುಗಳಾಗಿದ್ದು, ಹಸುಗಳ ಸಾವಿನಿಂದ ರೈತ ಕಂಗಾಲಾಗಿ ಪರಿಹಾರಕ್ಕೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಪಶು ಇಲಾಖೆ ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿ, ಅಸ್ವಸ್ಥ ಹಸುವಿಗೆ ಚಿಕಿತ್ಸೆ ಕೊಟ್ಟಿದ್ದಾರೆ. ಕಲುಷಿತ ಪಶು ಆಹಾರದಿಂದ ಹಸುಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.